ಜನವರಿ 30ರ ನಂತರ ಕಂಬಳ ಪ್ರಾರಂಭ :ಸಂಸದ ನಳಿನ್ ಕುಮಾರ್ ಕಟೀಲ್ -Vishwanews24

Featured, ದಕ್ಷಿಣ ಕನ್ನಡ

ಜನವರಿ 30ರ ನಂತರ ಕಂಬಳ ಪ್ರಾರಂಭ :ಸಂಸದ ನಳಿನ್ ಕುಮಾರ್ ಕಟೀಲ್ -Vishwanews24

ಮಂಗಳೂರು:ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕಂಬಳ ಕ್ರೀಡೆಯನ್ನು ಜಿಲ್ಲೆಯಲ್ಲಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು ರಾಜಮಹಾರಾಜರುಗಳು ಪ್ರೋತ್ಸಾಹ ನೀಡಿದ್ದಾರೆ ಎಂದ ಅವರು ಈ ಬಾರಿ ಕೋವಿಡ್ ಸೋಂಕಿನಿಂದಾಗಿ ರೈತರು ಜನವರಿ ಅಂತ್ಯವಾದರೂ ಪ್ರಾರಂಭಿಸಿಲ್ಲ. ಆಯೋಜಕರು ಕೋವಿಡ್ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸುವುದರೊಂದಿಗೆ ಜನವರಿ 30 ರಿಂದ ಜಿಲ್ಲೆಯಲ್ಲಿ 10 ಕಂಬಳ ಕಾರ್ಯಕ್ರಮವನ್ನು ಏರ್ಪಡಿಸಬಹುದಾಗಿದೆ ಎಂದರು .

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ .ವಿ ಮಾತನಾಡಿ, ಕೋವಿಡ್ ಸಂದರ್ಭವಾದ ಈ ದಿನಗಳಲ್ಲಿ ಅತಿ ಹೆಚ್ಚು ಜಾಗ್ರತೆ ವಹಿಸಬೇಕು, ಹೆಚ್ಚು ಜನರು ಸೇರಿದಂತೆ ಕ್ರಮವಹಿಸಬೇಕು. ರಾತ್ರಿ ಹತ್ತು ಗಂಟೆಯ ಒಳಗಾಗಿ ಕಂಬಳ ಕಾರ್ಯಕ್ರಮವನ್ನು ಪೂರ್ಣಗೊಳಿಸಬೇಕು. ಕಾರ್ಯಕ್ರಮಕ್ಕೆ ವಯಸ್ಸಾದವರು ಮತ್ತು ಮಕ್ಕಳು ಭಾಗವಹಿಸದಂತೆ ಎಚ್ಚರವಹಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದರು