ಮಂಗಳೂರು:ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕಂಬಳ ಕ್ರೀಡೆಯನ್ನು ಜಿಲ್ಲೆಯಲ್ಲಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು ರಾಜಮಹಾರಾಜರುಗಳು ಪ್ರೋತ್ಸಾಹ ನೀಡಿದ್ದಾರೆ ಎಂದ ಅವರು ಈ ಬಾರಿ ಕೋವಿಡ್ ಸೋಂಕಿನಿಂದಾಗಿ ರೈತರು ಜನವರಿ ಅಂತ್ಯವಾದರೂ ಪ್ರಾರಂಭಿಸಿಲ್ಲ. ಆಯೋಜಕರು ಕೋವಿಡ್ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸುವುದರೊಂದಿಗೆ ಜನವರಿ 30 ರಿಂದ ಜಿಲ್ಲೆಯಲ್ಲಿ 10 ಕಂಬಳ ಕಾರ್ಯಕ್ರಮವನ್ನು ಏರ್ಪಡಿಸಬಹುದಾಗಿದೆ ಎಂದರು .
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ .ವಿ ಮಾತನಾಡಿ, ಕೋವಿಡ್ ಸಂದರ್ಭವಾದ ಈ ದಿನಗಳಲ್ಲಿ ಅತಿ ಹೆಚ್ಚು ಜಾಗ್ರತೆ ವಹಿಸಬೇಕು, ಹೆಚ್ಚು ಜನರು ಸೇರಿದಂತೆ ಕ್ರಮವಹಿಸಬೇಕು. ರಾತ್ರಿ ಹತ್ತು ಗಂಟೆಯ ಒಳಗಾಗಿ ಕಂಬಳ ಕಾರ್ಯಕ್ರಮವನ್ನು ಪೂರ್ಣಗೊಳಿಸಬೇಕು. ಕಾರ್ಯಕ್ರಮಕ್ಕೆ ವಯಸ್ಸಾದವರು ಮತ್ತು ಮಕ್ಕಳು ಭಾಗವಹಿಸದಂತೆ ಎಚ್ಚರವಹಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದರು
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]