ಮಂಗಳೂರು:ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವನ್ನು ಈ ಬಾರಿ ಕೋವಿಡ್ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ಅನುಸರಿಸುವುದರೂಂದಿಗೆ ಆಯೋಜಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಸ್ತುತ ಸಾಲಿನ ಕಂಬಳ ಕ್ರೀಡೆಯನ್ನು ಜಿಲ್ಲೆಯಲ್ಲಿ ಆಯೋಜಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಂಬಳಕ್ಕೆ ನೂರಾರು ವರ್ಷದ ಇತಿಹಾಸವಿದ್ದು ರಾಜಮಹಾರಾಜರುಗಳು ಪ್ರೋತ್ಸಾಹ ನೀಡಿದ್ದಾರೆ ಎಂದ ಅವರು ಈ ಬಾರಿ ಕೋವಿಡ್ ಸೋಂಕಿನಿಂದಾಗಿ ರೈತರು ಜನವರಿ ಅಂತ್ಯವಾದರೂ ಪ್ರಾರಂಭಿಸಿಲ್ಲ. ಆಯೋಜಕರು ಕೋವಿಡ್ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸುವುದರೊಂದಿಗೆ ಜನವರಿ 30 ರಿಂದ ಜಿಲ್ಲೆಯಲ್ಲಿ 10 ಕಂಬಳ ಕಾರ್ಯಕ್ರಮವನ್ನು ಏರ್ಪಡಿಸಬಹುದಾಗಿದೆ ಎಂದರು .
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ .ವಿ ಮಾತನಾಡಿ, ಕೋವಿಡ್ ಸಂದರ್ಭವಾದ ಈ ದಿನಗಳಲ್ಲಿ ಅತಿ ಹೆಚ್ಚು ಜಾಗ್ರತೆ ವಹಿಸಬೇಕು, ಹೆಚ್ಚು ಜನರು ಸೇರಿದಂತೆ ಕ್ರಮವಹಿಸಬೇಕು. ರಾತ್ರಿ ಹತ್ತು ಗಂಟೆಯ ಒಳಗಾಗಿ ಕಂಬಳ ಕಾರ್ಯಕ್ರಮವನ್ನು ಪೂರ್ಣಗೊಳಿಸಬೇಕು. ಕಾರ್ಯಕ್ರಮಕ್ಕೆ ವಯಸ್ಸಾದವರು ಮತ್ತು ಮಕ್ಕಳು ಭಾಗವಹಿಸದಂತೆ ಎಚ್ಚರವಹಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಸೂಚಿಸಿದರು
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…