Featured

ಜನವರಿ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಪ್ಯೂ ರದ್ದು : ಆರ್.ಅಶೋಕ್ – Vishwanews24

ಜನವರಿ 31 ರಿಂದ ರಾಜ್ಯಾದ್ಯಂತ ನೈಟ್ ಕರ್ಪ್ಯೂ ರದ್ದು

ಮಸೀದಿ, ಚರ್ಚ್,ದೇವಾಲಯಗಳಲ್ಲಿ ಎಲ್ಲ ಧಾರ್ಮಿಕ ಸೇವೆಗಳಿಗೆ ಮುಕ್ತ ಅವಕಾಶ

ಸಿನಿಮಾ ಥಿಯೇಟರ್, ಈಜು ಕೊಳ​ಗಳಿಗೆ ಶೇ. 50 ಜನರಿಗೆ ಮಾತ್ರ ಅವಕಾಶ..

ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಮಾತ್ರ ಅವಕಾಶ..

ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಮುಂದುವರಿಕೆ

ಬೆಂಗಳೂರು,: ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಇನ್ನು ಮುಂದೆ ನೈಟ್ ಕರ್ಪ್ಯೂ ಇರಲ್ಲ, ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್​ಗಳಿಗೆ ಶೇ. 100 ರಷ್ಟು ಅವಕಾಶ ನೀಡಲಾಗಿದೆ ಆದರೆ ಸಿನಿಮಾ ಥಿಯೇಟರ್, ಈಜು ಕೊಳ​ಗಳಿಗೆ ಶೇ. 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಮಸೀದಿ, ಚರ್ಚ್,ದೇವಾಲಯಗಳಲ್ಲಿ ಎಲ್ಲ ಧಾರ್ಮಿಕ ಸೇವೆಗಳಿಗೆ ಮುಕ್ತ ಅವಕಾಶವಿದೆ. ಆದರೆ ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಮುಂದುವರಿಸಲಾಗಿದ್ದು, ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದಿದ್ದಾರೆ.

ಇನ್ನು ಪ್ರವಾಸಿತಾಣಗಳ ಭೇಟಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ, ರಾಜ್ಯದ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಿರಲಿವೆ. ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗೆ ಅವಕಾಶ ಇರಲಿದ್ದು, ಕೊವಿಡ್​ ನಿಯಮ ಪಾಲಿಸಿ ಭೇಟಿ ನೀಡಬಹುದು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್​​ ಹೇಳಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago