ಜನವಸತಿ ಪ್ರದೇಶಕ್ಕೆ ನುಗ್ಗಿದ ಸಮುದ್ರದ ನೀರು ; ಎಂಆರ್‌ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯ ; ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರ ಒತ್ತಾಯ -Vishwanews24

ಜನವಸತಿ ಪ್ರದೇಶಕ್ಕೆ ನುಗ್ಗಿದ ಸಮುದ್ರದ ನೀರು ;

ಎಂಆರ್‌ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯ ;

ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರ ಒತ್ತಾಯ -Vishwanews24

ಮಂಗಳೂರು: ನಗರದ ಪಣಂಬೂರು ಸಮೀಪದ ತಣ್ಣೀರುಬಾವಿ ಎಂಬಲ್ಲಿ ಸಮುದ್ರದ ನೀರು ದಡಕ್ಕೆ ನುಗ್ಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ.

ಎಂಆರ್‌ಪಿಎಲ್ ಪೆಟ್ರೋಲಿಯಂ ಕಂಪನಿಗೆ ಕಡಲಿನ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಘಟಕ ಈ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದೆ. ಹೀಗಾಗಿ ಸಮುದ್ರದ ನೀರನ್ನು ಪೈಪ್ ಮೂಲಕ ಸ್ಥಾವರಕ್ಕೆ ತರುವ ಕಾಮಗಾರಿ ನಡೆಯುತ್ತಿದ್ದು, ಪೈಪ್ ಅಳವಡಿಸಲು ಸಮುದ್ರ ತೀರದ ಮರಳನ್ನು ತೆಗೆಯಲಾಗಿದೆ.

ಇದೀಗ ಕಡಲಿನ ಅಬ್ಬರ ಹೆಚ್ಚಾಗಿದ್ದರಿಂದ ಸಮುದ್ರದ ನೀರು ಮರಳು ತೆಗೆದ ಪ್ರದೇಶದಿಂದ ಜನ ವಸತಿ ಸ್ಥಳಕ್ಕೆ ನುಗ್ಗಿ ಬಂದಿದೆ.ಸಮುದ್ರದ ಅಲೆಗಳ ಅಬ್ಬರ ಹೆಚ್ಚಾದರೆ ಇನ್ನೂ ತೊಂದರೆಗಳಾಗಬಹುದು ಅನ್ನೋ ಹಿನ್ನೆಲೆಯಲ್ಲಿ ಸ್ಥಳೀಯ 15 ಕುಟುಂಬಗಳನ್ನು ಜಿಲ್ಲಾಡಳಿತ ಸ್ಥಳಾಂತರಿಸಿದೆ. ಎಂಆರ್‌ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ. ಹೀಗಾಗಿ ಇಲ್ಲಿ ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ತಹಶೀಲ್ದಾರ್, ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago