ಜನವಸತಿ ಪ್ರದೇಶಕ್ಕೆ ನುಗ್ಗಿದ ಸಮುದ್ರದ ನೀರು ; ಎಂಆರ್‌ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯ ; ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರ ಒತ್ತಾಯ -Vishwanews24

ಜನವಸತಿ ಪ್ರದೇಶಕ್ಕೆ ನುಗ್ಗಿದ ಸಮುದ್ರದ ನೀರು ;

ಎಂಆರ್‌ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯ ;

ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರ ಒತ್ತಾಯ -Vishwanews24

ಮಂಗಳೂರು: ನಗರದ ಪಣಂಬೂರು ಸಮೀಪದ ತಣ್ಣೀರುಬಾವಿ ಎಂಬಲ್ಲಿ ಸಮುದ್ರದ ನೀರು ದಡಕ್ಕೆ ನುಗ್ಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ.

ಎಂಆರ್‌ಪಿಎಲ್ ಪೆಟ್ರೋಲಿಯಂ ಕಂಪನಿಗೆ ಕಡಲಿನ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಘಟಕ ಈ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದೆ. ಹೀಗಾಗಿ ಸಮುದ್ರದ ನೀರನ್ನು ಪೈಪ್ ಮೂಲಕ ಸ್ಥಾವರಕ್ಕೆ ತರುವ ಕಾಮಗಾರಿ ನಡೆಯುತ್ತಿದ್ದು, ಪೈಪ್ ಅಳವಡಿಸಲು ಸಮುದ್ರ ತೀರದ ಮರಳನ್ನು ತೆಗೆಯಲಾಗಿದೆ.

ಇದೀಗ ಕಡಲಿನ ಅಬ್ಬರ ಹೆಚ್ಚಾಗಿದ್ದರಿಂದ ಸಮುದ್ರದ ನೀರು ಮರಳು ತೆಗೆದ ಪ್ರದೇಶದಿಂದ ಜನ ವಸತಿ ಸ್ಥಳಕ್ಕೆ ನುಗ್ಗಿ ಬಂದಿದೆ.ಸಮುದ್ರದ ಅಲೆಗಳ ಅಬ್ಬರ ಹೆಚ್ಚಾದರೆ ಇನ್ನೂ ತೊಂದರೆಗಳಾಗಬಹುದು ಅನ್ನೋ ಹಿನ್ನೆಲೆಯಲ್ಲಿ ಸ್ಥಳೀಯ 15 ಕುಟುಂಬಗಳನ್ನು ಜಿಲ್ಲಾಡಳಿತ ಸ್ಥಳಾಂತರಿಸಿದೆ. ಎಂಆರ್‌ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ. ಹೀಗಾಗಿ ಇಲ್ಲಿ ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ತಹಶೀಲ್ದಾರ್, ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

9 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

9 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

9 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

9 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

9 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

9 hours ago