ಮಂಗಳೂರು: ನಗರದ ಪಣಂಬೂರು ಸಮೀಪದ ತಣ್ಣೀರುಬಾವಿ ಎಂಬಲ್ಲಿ ಸಮುದ್ರದ ನೀರು ದಡಕ್ಕೆ ನುಗ್ಗಿದ್ದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ.
ಎಂಆರ್ಪಿಎಲ್ ಪೆಟ್ರೋಲಿಯಂ ಕಂಪನಿಗೆ ಕಡಲಿನ ಉಪ್ಪು ನೀರನ್ನು ಸಿಹಿ ನೀರನ್ನಾಗಿಸುವ ಘಟಕ ಈ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದೆ. ಹೀಗಾಗಿ ಸಮುದ್ರದ ನೀರನ್ನು ಪೈಪ್ ಮೂಲಕ ಸ್ಥಾವರಕ್ಕೆ ತರುವ ಕಾಮಗಾರಿ ನಡೆಯುತ್ತಿದ್ದು, ಪೈಪ್ ಅಳವಡಿಸಲು ಸಮುದ್ರ ತೀರದ ಮರಳನ್ನು ತೆಗೆಯಲಾಗಿದೆ.
ಇದೀಗ ಕಡಲಿನ ಅಬ್ಬರ ಹೆಚ್ಚಾಗಿದ್ದರಿಂದ ಸಮುದ್ರದ ನೀರು ಮರಳು ತೆಗೆದ ಪ್ರದೇಶದಿಂದ ಜನ ವಸತಿ ಸ್ಥಳಕ್ಕೆ ನುಗ್ಗಿ ಬಂದಿದೆ.ಸಮುದ್ರದ ಅಲೆಗಳ ಅಬ್ಬರ ಹೆಚ್ಚಾದರೆ ಇನ್ನೂ ತೊಂದರೆಗಳಾಗಬಹುದು ಅನ್ನೋ ಹಿನ್ನೆಲೆಯಲ್ಲಿ ಸ್ಥಳೀಯ 15 ಕುಟುಂಬಗಳನ್ನು ಜಿಲ್ಲಾಡಳಿತ ಸ್ಥಳಾಂತರಿಸಿದೆ. ಎಂಆರ್ಪಿಎಲ್ ನ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ. ಹೀಗಾಗಿ ಇಲ್ಲಿ ಸ್ಥಾವರದ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ತಹಶೀಲ್ದಾರ್, ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…