ಹಾಸನ :ಜನವಿರೋಧಿ, ಬಡವರ ವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರಕಾರವನ್ನು ಬುಡಸಮೇತ ಕಿತ್ತು ಹಾಕುವ ಸಂಕಲ್ಪ ಮಾಡಿ ಮೈಸೂರು, ಮಂಡ್ಯದ ಮೂಲಕ ಜನಾಕ್ರೋಶ ಯಾತ್ರೆಯು ಹಾಸನಕ್ಕೆ ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ಯು ಹಾಸನದ ಹಳೇ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭಗೊಂಡಿತು. ನಂತರ ಎನ್.ಆರ್ ವೃತ್ತದ ಮಾರ್ಗವಾಗಿ ಮಹಾವೀರ ವೃತ್ತದ ಬಳಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಸಲಾಯಿತು. ‘ಈ ಜನಾಕ್ರೋಶ ಯಾತ್ರೆಗೆ ವರುಣದೇವನೂ ಬಿಜೆಪಿಯವರಿಗೆ ಜಯವಾಗಲಿ ಎಂದು ಆಶೀರ್ವಾದ ಮಾಡಿದ್ದಾರೆ’ ಎಂದು ವಿಜಯೇಂದ್ರ ಅವರು ವಿಶ್ಲೇಷಿಸಿದರು.
ಅಭಿವೃದ್ಧಿ ಮಾಡುತ್ತೇವೆ; ಜನಪರ ಸರಕಾರ ಕೊಡುವುದಾಗಿ ತಿಳಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿನ ಸರಕಾರ ಬಂದಾಗಿನಿಂದ 50 ಕ್ಕೂ ಹೆಚ್ಚು ಜನಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿದ್ದಾರೆ ಎಂದು ಟೀಕಿಸಿದರು.
ಈ ಸರಕಾರ ಬೀಳಿಸಲು ಕಾಂಗ್ರೆಸ್ ಶಾಸಕರೇ ಸಾಕು..ಸರಕಾರ ಮನಬಂದಂತೆ- ಜನವಿರೋಧಿಯಾಗಿ ವರ್ತಿಸುತ್ತಿದೆ. ಈ ಸರಕಾರದ ಕಿವಿ ಹಿಂಡುವ ಕಾರ್ಯವನ್ನು ವಿಪಕ್ಷದ ನೆಲೆಯಲ್ಲಿ ಮಾಡುತ್ತಿದ್ದೇವೆ ಎಂದು ವಿಜಯೇಂದ್ರ ಅವರು ವಿವರಿಸಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…