Featured

ಜನಸಂಖ್ಯೆ ನಿಯಂತ್ರಣಕ್ಕೆ ಕೇವಲ ಕಾನೂನು ರೂಪಿಸುವುದರಿಂದ ಯಾವ ಪ್ರಯೋಜನವೂ ಇಲ್ಲ : ನಿತೀಶ್ ಕುಮಾರ್ – Vishwanews24

ಜನಸಂಖ್ಯೆ ನಿಯಂತ್ರಣಕ್ಕೆ ಕೇವಲ ಕಾನೂನು ರೂಪಿಸುವುದರಿಂದ ಯಾವ ಪ್ರಯೋಜನವೂ ಇಲ್ಲ : ನಿತೀಶ್ ಕುಮಾರ್ – Vishwanews24

2040ರ ವೇಳೆಗೆ ದೇಶದಲ್ಲಿ ಜನನ ಪ್ರಮಾಣ ಇಳಿಮುಖವಾಗಲಿದೆ..

ಈ ಗುರಿಯನ್ನು ತಲುಪಬೇಕಾದರೆ ಮಹಿಳೆಯರಿಗೆ ಸೂಕ್ತ ಶಿಕ್ಷಣ ನೀಡಿ ಅರಿವು ಮೂಡಿಸುವುದು ಅಗತ್ಯ..

ಪಾಟ್ನಾ, : ”ಜನಸಂಖ್ಯೆ ನಿಯಂತ್ರಣಕ್ಕೆ ಕೇವಲ ಕಾನೂನು ರೂಪಿಸುವುದರಿಂದ ಯಾವ ಪ್ರಯೋಜನವೂ ಇಲ್ಲ; ಈ ಗುರಿಯನ್ನು ತಲುಪಬೇಕಾದರೆ ಮಹಿಳೆಯರಿಗೆ ಸೂಕ್ತ ಶಿಕ್ಷಣ ನೀಡಿ ಅರಿವು ಮೂಡಿಸುವುದು ಅಗತ್ಯ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಾದಿಸಿದ್ದಾರೆ.

‘ಜನತಾ ಕೀ ದರ್ಬಾರ್ ಮೇ ಮುಖ್ಯಮಂತ್ರಿ’ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳು ಏನು ಮಾಡುತ್ತಿವೆ ಎಂಬ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. “ಈ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟ. ಬಹುಶಃ ಇದು ಬೇರೆ ರಾಜ್ಯಗಳಿಂತ ಭಿನ್ನವಾಗಿರಬಹುದು” ಎಂದು ಸ್ಪಷ್ಟಪಡಿಸಿದರು. ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಸರಕಾರ ಕರಡು ಮಸೂದೆ ಸಿದ್ಧಪಡಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಮಿತ್ರಪಕ್ಷವಾಗಿರುವ ಜೆಡಿಯು ಪಕ್ಷದ ಅಭಿಪ್ರಾಯ ಭಿನ್ನವಾಗಿರುವುದು ಇದರಿಂದ ಸ್ಪಷ್ಟವಾಗಿ ತಿಳಿದುಬಂದಿದೆ.

ಒಂದು ಸಮೀಕ್ಷೆ ಪ್ರಕಾರ ಬಿಹಾರದಲ್ಲಿ ಜನನ ದರ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಇದೆ. ಬಿಹಾರದಲ್ಲಿ ಮಹಿಳೆಯರಿಗೆ ಇಂಟರ್‌ಮೀಡಿಯೇಟ್ ಹಂತದವರೆಗೆ ಶಿಕ್ಷಣ ನೀಡಿದಾಗ ಜನನ ಪ್ರಮಾಣ 1.6% ಇದ್ದು ದೇಶದಲ್ಲಿ ಇದು 1.7% ಇದೆ. ಈ ಹಿಂದೆ ಮಹಿಳೆಯರು ಮೆಟ್ರಿಕ್ಯುಲೇಶನ್ ಶಿಕ್ಷಣ ಪಡೆಯುತ್ತಿದ್ದಾಗ ಜನನ ಪ್ರಮಾಣ 2% ಇತ್ತು ಎಂದು ನಿತೀಶ್ ಹೇಳಿದರು.

ರಾಜ್ಯದಲ್ಲಿ ಜನನ ದರ 4% ಕೂಡಾ ಇತ್ತು. ಅದನ್ನು 3%ಗೆ ಇಳಿಸಲಾಯಿತು. ಇದು ಬಿಹಾರ ಸರಕಾರದ ಯೋಜನೆಗಳ ಪರಿಣಾಮ. 2040ರ ವೇಳೆಗೆ ದೇಶದಲ್ಲಿ ಜನನ ಪ್ರಮಾಣ ಇಳಿಮುಖವಾಗಲಿದೆ ಎಂದು ಅವರು ಭವಿಷ್ಯ ನುಡಿದರು

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

11 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

11 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

11 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

12 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago