ಪಾಟ್ನಾ, : ”ಜನಸಂಖ್ಯೆ ನಿಯಂತ್ರಣಕ್ಕೆ ಕೇವಲ ಕಾನೂನು ರೂಪಿಸುವುದರಿಂದ ಯಾವ ಪ್ರಯೋಜನವೂ ಇಲ್ಲ; ಈ ಗುರಿಯನ್ನು ತಲುಪಬೇಕಾದರೆ ಮಹಿಳೆಯರಿಗೆ ಸೂಕ್ತ ಶಿಕ್ಷಣ ನೀಡಿ ಅರಿವು ಮೂಡಿಸುವುದು ಅಗತ್ಯ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಾದಿಸಿದ್ದಾರೆ.
‘ಜನತಾ ಕೀ ದರ್ಬಾರ್ ಮೇ ಮುಖ್ಯಮಂತ್ರಿ’ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ರಾಜ್ಯಗಳು ಏನು ಮಾಡುತ್ತಿವೆ ಎಂಬ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ. “ಈ ವಿಚಾರದಲ್ಲಿ ನನ್ನ ನಿಲುವು ಸ್ಪಷ್ಟ. ಬಹುಶಃ ಇದು ಬೇರೆ ರಾಜ್ಯಗಳಿಂತ ಭಿನ್ನವಾಗಿರಬಹುದು” ಎಂದು ಸ್ಪಷ್ಟಪಡಿಸಿದರು. ಉತ್ತರ ಪ್ರದೇಶದಲ್ಲಿ ಆದಿತ್ಯನಾಥ್ ಸರಕಾರ ಕರಡು ಮಸೂದೆ ಸಿದ್ಧಪಡಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಮಿತ್ರಪಕ್ಷವಾಗಿರುವ ಜೆಡಿಯು ಪಕ್ಷದ ಅಭಿಪ್ರಾಯ ಭಿನ್ನವಾಗಿರುವುದು ಇದರಿಂದ ಸ್ಪಷ್ಟವಾಗಿ ತಿಳಿದುಬಂದಿದೆ.
ಒಂದು ಸಮೀಕ್ಷೆ ಪ್ರಕಾರ ಬಿಹಾರದಲ್ಲಿ ಜನನ ದರ ರಾಷ್ಟ್ರೀಯ ಸರಾಸರಿಗಿಂತ ಕಡಿಮೆ ಇದೆ. ಬಿಹಾರದಲ್ಲಿ ಮಹಿಳೆಯರಿಗೆ ಇಂಟರ್ಮೀಡಿಯೇಟ್ ಹಂತದವರೆಗೆ ಶಿಕ್ಷಣ ನೀಡಿದಾಗ ಜನನ ಪ್ರಮಾಣ 1.6% ಇದ್ದು ದೇಶದಲ್ಲಿ ಇದು 1.7% ಇದೆ. ಈ ಹಿಂದೆ ಮಹಿಳೆಯರು ಮೆಟ್ರಿಕ್ಯುಲೇಶನ್ ಶಿಕ್ಷಣ ಪಡೆಯುತ್ತಿದ್ದಾಗ ಜನನ ಪ್ರಮಾಣ 2% ಇತ್ತು ಎಂದು ನಿತೀಶ್ ಹೇಳಿದರು.
ರಾಜ್ಯದಲ್ಲಿ ಜನನ ದರ 4% ಕೂಡಾ ಇತ್ತು. ಅದನ್ನು 3%ಗೆ ಇಳಿಸಲಾಯಿತು. ಇದು ಬಿಹಾರ ಸರಕಾರದ ಯೋಜನೆಗಳ ಪರಿಣಾಮ. 2040ರ ವೇಳೆಗೆ ದೇಶದಲ್ಲಿ ಜನನ ಪ್ರಮಾಣ ಇಳಿಮುಖವಾಗಲಿದೆ ಎಂದು ಅವರು ಭವಿಷ್ಯ ನುಡಿದರು
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…
ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…
ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…
ಮೆಡಿಕಲ್ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…
ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…