ಚಿತ್ರದುರ್ಗ: ಕೋವಿಡ್ ನಿಯಂತ್ರಣದಲ್ಲಿ ವೈಫಲ್ಯ ಹಾಗೂ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದರು.
ಹಿರಿಯೂರಲ್ಲಿ ಮಾತನಾಡಿರುವ ಅವರು, ಬಿಜೆಪಿ ಆಡಳಿತಾವಧಿಯಲ್ಲಿ ಹೆಣ ಸುಡೋಕೂ ಸರದಿ, ಆಸ್ಪತ್ರೆ ಸೇರೋಕು ಸರದಿ,ಔಷಧಿಗೂ ಸರದಿ, ಲಸಿಕೆ ಪಡೆಯಲೂ ಸರದಿ ಸಾಲು ನಿಲ್ಲುವಂತಾಯ್ತು ಬಿಜೆಪಿ ಸರ್ಕಾರ ಇನ್ನೇನು ಜನರನ್ನು ಕಾಪಾಡಿದೆ ? ಹೆಣದಲ್ಲೂ ಹಣ, ಔಷಧಿಯಲ್ಲೂ ಹಣ ಲೂಟಿ ಹೊಡೆಯುತ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡರು.
ದೇಶಕ್ಕೆ ಕೊರೊನಾ ಖಾಯಿಲೆ ತಂದದ್ದು ಯಾರು? ನಾವು ತಂದಿದ್ದೇವಾ? ಎಂದು ಪ್ರಶ್ನಿಸಿದ ಡಿಕೆಶಿ, ಜನ ಬಿಜೆಪಿ ಸರ್ಕಾರಕ್ಕೆ ಉಗಿಯುತ್ತಿದ್ದಾರೆ ಎಂದು ಛಿಮಾರಿ ಹಾಕಿದರು.
ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಇಂಧನ ಬೆಲೆ ಖಂಡಿಸಿ ಜೂನ್ 15 ರಿಂದ ಐದು ದಿನ ಐದು ಸಾವಿರ ಕಡೆ ಜನಪರ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ ಡಿಕೆಶಿ, ಸಿಎಂ ಬಿಎಸ್ ವೈ, ಪಿಎಂ ಮೋದಿಗೆ ನನ್ನ ಪ್ರಶ್ನೆ, ತೈಲ ಬೆಲೆ ಏರಿಸಿದಂತೆ ರೈತರಿಗೆ ಬೆಂಬಲ ಬೆಲೆ ನೀಡುವುದು ಏರಿಸಿದ್ದೀರಾ? ರೈತರು ಬೆಳೆದ ಬೆಳೆಯ ಬೆಲೆ ಏರಿಸಿದ್ದೀರಾ? ಸರ್ಕಾರಿ, ಖಾಸಗಿ, ದಿನಗೂಲಿ ನೌಕರರ ಸಂಬಳ ಏರಿಸಿದ್ದೀರಾ?. ಇಲ್ಲ. ನರೇಗಾ ಕೂಲಿ ಗಣವೂ ಏರಿಸಿಲ್ಲ, ನಿಮ್ಮ ಜೇಬು ಮಾತ್ರ ತುಂಬಬೇಕು. ಜನಸಾಮಾನ್ಯರು ಸೇರಿ ಈ ಸರ್ಕಾರ ಕಿತ್ತೆಸೆಯಬೇಕೆಂದು ಆಗ್ರಹಿಸಿದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…