ದಾವಣಗೆರೆ: ಮೂರನೇ ಹಂತದ ಜನಾಕ್ರೋಶ ಯಾತ್ರೆಯು ಇಂದು ಆರಂಭವಾಗಲಿದ್ದು, ದಾವಣಗೆರೆ, ಹಾವೇರಿ ಜಿಲ್ಲೆಯ ಮೂಲಕ ನಾಳೆ ಗದಗ, ಕೊಪಳ ಜಿಲ್ಲೆಗೆ ನಮ್ಮ ಯಾತ್ರೆ ತೆರಳಲಿದೆ. ಈ ಹಂತದಲ್ಲಿ 10 ಜಿಲ್ಲೆಗಳಿಗೆ ಭೇಟಿ ಕೊಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಪ್ರತಿ ಜಿಲ್ಲೆಯಲ್ಲಿ ಉತ್ಸಾಹ ಹೆಚ್ಚಾಗಿದೆ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಮುಖ್ಯಮಂತ್ರಿಗಳೂ ಗೊಂದಲದಲ್ಲಿದ್ದಾರೆ. ಗ್ಯಾರಂಟಿಗಳ ಭ್ರಮೆಯಲ್ಲಿದ್ದ ಮುಖ್ಯಮಂತ್ರಿಗಳು ವಾಸ್ತವಿಕ ಸತ್ಯವನ್ನು ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.
ಮುಖ್ಯಮಂತ್ರಿಗಳು ಮತ್ತು ಸಚಿವರು ಬೆಂಗಳೂರಿಗೆ ಸೀಮಿತವಾಗಿದ್ದಾರೆ ಎಂದು ಮೊದಲ ಹಂತದಲ್ಲೇ ಹೇಳಿದ್ದೆ. ಇದರ ಬಳಿಕ ಮುಖ್ಯಮಂತ್ರಿಗಳು ಎಚ್ಚತ್ತುಕೊಂಡಿದ್ದಾರೆ ಎಂಬ ಭಾವನೆ ನನ್ನದು ಎಂದರು. ಅದಾದ ಬಳಿಕ ಬೆಳಗಾವಿ ಪ್ರವಾಸ, ಬೇರೆ ಬೇರೆ ಜಿಲ್ಲೆಗಳ ಪ್ರವಾಸ ನಿಗದಿಯಾಗಿದೆ. ಜನಾಕ್ರೋಶದ ಬಿಸಿ ರಾಜ್ಯ ಸರಕಾರಕ್ಕೆ ತಟ್ಟಿದೆ ಎಂದು ವಿಶ್ಲೇಷಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…