ಮೈಸೂರು : “ಜನಾಭಿಪ್ರಾಯದ ವಿರುದ್ದ ಮಾತನಾಡಿದ ಬಳಿಕ ಕ್ಷಮೆಯಾಚಿಸುವುದು ಛಾಳಿಯಾಗಿದೆ. ಹಂಸಲೇಖ ಅವರು ಪರಿಜ್ಞಾನದಿಂದ ಮಾತನಾಡಬೇಕಿತ್ತು” ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಸ್ಲಿಂ ಸ್ಲೇಹಿತರನ್ನು ನಿಮ್ಮ ಮನೆಗೆ ಕರೆದು ಹಂದಿ ಮಾಂಸದ ಊಟ ಹಾಕಿ. ಆಗ ಅವರು ತಿನ್ನುತ್ತಾರಾ ನೋಡಿ. ಮುಸ್ಲಿಂ ಧರ್ಮದಲ್ಲಿ ಹಂದಿ ಮಾಂಸ ತಿನ್ನುವುದು ನಿಷೇಧ. ಹಾಗಾಗಿ ಅವರು ಹಂದಿ ಮಾಂಸ ತಿನ್ನುವುದಿಲ್ಲ ಅದನ್ನು ತಪ್ಪು ಎಂದು ಹೇಳುತ್ತೀರಾ?” ಎಂದು ಪ್ರಶ್ನಿಸಿದ್ದಾರೆ.
“ಪೇಜಾವರ ಶ್ರೀಗಳು ಬೇರೆ ರೀತಿಯ ಜಾತಿ ಸ್ವಾಮೀಜಿ ರೀತಿ ಅಲ್ಲ. ಸಸ್ಯಾಹಾರ ಸಾಧು-ಸಂತರ ಆಹಾರ ಪದ್ಧತಿ. ಮನಸ್ಸಿನ ತಾರತಮ್ಯ ತೆಗೆದು ಹಾಕಲು ಹೋಗಿದ್ದರೇ ಹೊರತು ಆಹಾರ ಪದ್ಧತಿಯ ಸಮಾನತೆಗೆ ಅಲ್ಲ” ಎಂದು ತಿಳಿಸಿದ್ದಾರೆ.
“ಹಂಸಲೇಖ ಅವರು ಬಾಯಿ ತಪ್ಪಿನಿಂದ ಈ ರೀತಿಯಾಗಿ ಹೇಳಿದ್ದಾರೆ ಎಂದೆನಿಸುತ್ತಿಲ್ಲ. ಪ್ರಗತಿಪರ ಅನ್ನಿಸಿಕೊಳ್ಳುವ ಗೀಳಿಗೆ ಬಿದ್ದು ಪ್ರಚಾರಕ್ಕಾಗಿ ಹೀಗೆ ಮಾತನಾಡುತ್ತಿದ್ದಾರೆ” ಎಂದಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…