Featured

ಜನಿವಾರ ವಿವಾದ: ಸಮಗ್ರ ತನಿಖೆಗೆ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಆಗ್ರಹ – vishwanews24

ಜನಿವಾರ ವಿವಾದ: ಸಮಗ್ರ ತನಿಖೆಗೆ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಆಗ್ರಹ

ಉಡುಪಿ: ರಾಜ್ಯದಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಕೆಲವು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಯನ್ನು ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಖಂಡಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಶ್ರೀಕಾಂತ್ ಉಪಾಧ್ಯಾಯ, ರಾಜ್ಯದಲ್ಲಿ ನಾಲ್ಕು ಜಿಲ್ಲೆಯಲ್ಲಿ ಜನಿವಾರ ತೆಗೆಸಿದ ಘಟನೆ ಬೆಳಕಿಗೆ ಬಂದಿದೆ. ಆದರೆ ಇದು ಇನ್ನೆಷ್ಟು ಕಡೆಗಳಲ್ಲಿ ನಡೆದಿದೆ ಎಂಬುದು ತಿಳಿದಿಲ್ಲ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಇಂತಹ ಮಾನಸಿಕ ಮನೋಸ್ಥಿತಿ ನಿರ್ಮಾಣವಾಗುತ್ತಿರುವುದು ದೇಶದ ಅಖಂಡತೆಗೆ ಕೆಡಕಾಗಬಹುದು. ಇತ್ತೀಚಿನ ದಿನಗಳಲ್ಲಿ ಬ್ರಾಹ್ಮಣ ಸಮಾಜದ ನೈತಿಕತೆಯ ಮೇಲೆ ಕ್ರೌರ್ಯ, ದಬ್ಬಾಳಿಕೆ ಮಿತಿ ಮೀರಿ ನಡೆಯುತ್ತಿದೆ. ಸರಕಾರವು ಇನ್ನಾದರೂ ಎಚ್ಚೆತ್ತು ಇಂತಹ ದುರ್ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.

ಹೀಗೆ ಮುಂದುವರಿದಲ್ಲಿ ಶಾಂತ ಚಿತ್ತರಾದ ನಾವು ಉಗ್ರಚಿತ್ರರಾಗಿ, ಉಗ್ರ ಹೋರಾಟಕ್ಕೂ ಸಿದ್ಧರಾಗಬೇಕಾಗುತ್ತದೆ. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಬಳಿಯುವ ನೀತಿಯನ್ನು ನಾವು ಖಂಡಿಸುತ್ತೇವೆ. ಪರೀಕ್ಷಾ ವಂಚಿತ ಎಲ್ಲಾ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ಮಾಡಿಕೊಟ್ಟು, ಅವರ ಭವಿಷ್ಯಕ್ಕೆ ಸರಕಾರ ನೆರವಾಗಬೇಕು. ಹಾಗೆಯೇ ದಬ್ಬಾಳಿಕೆಯನ್ನು ತೋರಿಸಿದ ಅಧಿಕಾರಿವರ್ಗಕ್ಕೆ ಉಗ್ರ ಶಿಕ್ಷೆಯಾಗಬೇಕು. ಇದು ಎರಡನ್ನೂ ಮಾಡದಿದ್ದಲ್ಲಿ ಸಮಸ್ತ ವಿಪ್ರ ಸಮಾಜ ಸನಾತನ ಹಿಂದೂ ಧರ್ಮದವರೊಂದಿಗೆ ಸೇರಿ, ಉಗ್ರ ಹೋರಾಟಕ್ಕೆ ಕರೆಕೊಡಬೇಕಾಗುತ್ತದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಸಂದೀಪ್ ಕುಮಾರ್ ಮಂಜ, ಚಂದ್ರಕಾಂತ್ ಭಟ್, ಜಯರಾಮ ಆಚಾರ್ಯ, ಗಣೇಶ್ ಹೆಬ್ಬಾರ್, ವೈ.ಗಣೇಶ್, ಪಾಂಡುರಂಗ ಲಾಗ್ಟನ್‌ಕರ್, ಮಂಜುನಾಥ್ ಹೆಬ್ಬಾರ್ ಉಪಸ್ಥಿತರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago