Featured

ಜನ ಅಧಿಕಾರ ಕೊಟ್ಟಿದ್ದಾರೆ ; ಅದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆದ್ಯತೆ : ದಿನೇಶ್‍ ಗುಂಡೂರಾವ್ -Vishwanews24

ಬೆಂಗಳೂರು, -:ಕೆಲವರಿಗೆ ಅಧಿಕಾರ ಕೊಡುವ ಸಲುವಾಗಿ ಸಂಪುಟ ಪುನಾರಚಿಸಬೇಕು, ವಿಸ್ತರಣೆ ಮಾಡಬೇಕೆಂಬ ಪ್ರಶ್ನೆ ನಮ್ಮ ಮುಂದಿಲ್ಲ. ಜನ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎರಡರಲ್ಲಿ ಯಾವುದನ್ನು ಮಾಡಬೇಕೆಂಬ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಸಂಜೆ ಶಾಸಕಾಂಗ ಸಭೆ ಕರೆದಿದ್ದೇವೆ. ಎಲ್ಲರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಾಂಗ್ರೆಸ್‍ಗೆ ನಮ್ಮ ಯಾವ ಶಾಸಕರ ಮೇಲೂ ಅಪನಂಬಿಕೆ ಇಲ್ಲ.

ರಮೇಶ್ ಜಾರಕಿಹೊಳಿ ಅವರನ್ನು ಕೆಲವು ಶಾಸಕರು ಭೇಟಿಮಾಡಿದ ತಕ್ಷಣ ಅನುಮಾನ ಪಡಬೇಕಿಲ್ಲ. ಸದ್ಯಕ್ಕೆ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬರಗಾಲ ಇದೆ. ಕುಡಿಯುವ ನೀರು, ಮೇವು, ಜನರ ಉದ್ಯೋಗದ ಸಮಸ್ಯೆಗಳು ಕಾಡುತ್ತಿವೆ. ನಾವು ಆ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದೇವೆ.

ಸರ್ಕಾರ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಬೇಕು, ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ಒಳ್ಳೆಯ ಆಡಳಿತ ಕೊಡಬೇಕು ಎಂಬುದು ನಮ್ಮ ಆದ್ಯತೆ. ಸಮ್ಮಿಶ್ರ ಸರ್ಕಾರ ಆತಂಕದಲ್ಲಿದೆ, ಅತಂತ್ರದಲ್ಲಿದೆ ಎಂಬುದೆಲ್ಲ ಊಹಾಫೋಹ. ಸರ್ಕಾರ ಸುಭದ್ರವಾಗಿದೆ. ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದರು.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

16 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago