Featured

ಜನ ಅಧಿಕಾರ ಕೊಟ್ಟಿದ್ದಾರೆ ; ಅದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆದ್ಯತೆ : ದಿನೇಶ್‍ ಗುಂಡೂರಾವ್ -Vishwanews24

ಬೆಂಗಳೂರು, -:ಕೆಲವರಿಗೆ ಅಧಿಕಾರ ಕೊಡುವ ಸಲುವಾಗಿ ಸಂಪುಟ ಪುನಾರಚಿಸಬೇಕು, ವಿಸ್ತರಣೆ ಮಾಡಬೇಕೆಂಬ ಪ್ರಶ್ನೆ ನಮ್ಮ ಮುಂದಿಲ್ಲ. ಜನ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎರಡರಲ್ಲಿ ಯಾವುದನ್ನು ಮಾಡಬೇಕೆಂಬ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಸಂಜೆ ಶಾಸಕಾಂಗ ಸಭೆ ಕರೆದಿದ್ದೇವೆ. ಎಲ್ಲರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಾಂಗ್ರೆಸ್‍ಗೆ ನಮ್ಮ ಯಾವ ಶಾಸಕರ ಮೇಲೂ ಅಪನಂಬಿಕೆ ಇಲ್ಲ.

ರಮೇಶ್ ಜಾರಕಿಹೊಳಿ ಅವರನ್ನು ಕೆಲವು ಶಾಸಕರು ಭೇಟಿಮಾಡಿದ ತಕ್ಷಣ ಅನುಮಾನ ಪಡಬೇಕಿಲ್ಲ. ಸದ್ಯಕ್ಕೆ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬರಗಾಲ ಇದೆ. ಕುಡಿಯುವ ನೀರು, ಮೇವು, ಜನರ ಉದ್ಯೋಗದ ಸಮಸ್ಯೆಗಳು ಕಾಡುತ್ತಿವೆ. ನಾವು ಆ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದೇವೆ.

ಸರ್ಕಾರ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಬೇಕು, ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ಒಳ್ಳೆಯ ಆಡಳಿತ ಕೊಡಬೇಕು ಎಂಬುದು ನಮ್ಮ ಆದ್ಯತೆ. ಸಮ್ಮಿಶ್ರ ಸರ್ಕಾರ ಆತಂಕದಲ್ಲಿದೆ, ಅತಂತ್ರದಲ್ಲಿದೆ ಎಂಬುದೆಲ್ಲ ಊಹಾಫೋಹ. ಸರ್ಕಾರ ಸುಭದ್ರವಾಗಿದೆ. ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago