Featured

ಜನ ಅಧಿಕಾರ ಕೊಟ್ಟಿದ್ದಾರೆ ; ಅದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆದ್ಯತೆ : ದಿನೇಶ್‍ ಗುಂಡೂರಾವ್ -Vishwanews24

ಬೆಂಗಳೂರು, -:ಕೆಲವರಿಗೆ ಅಧಿಕಾರ ಕೊಡುವ ಸಲುವಾಗಿ ಸಂಪುಟ ಪುನಾರಚಿಸಬೇಕು, ವಿಸ್ತರಣೆ ಮಾಡಬೇಕೆಂಬ ಪ್ರಶ್ನೆ ನಮ್ಮ ಮುಂದಿಲ್ಲ. ಜನ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎರಡರಲ್ಲಿ ಯಾವುದನ್ನು ಮಾಡಬೇಕೆಂಬ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಸಂಜೆ ಶಾಸಕಾಂಗ ಸಭೆ ಕರೆದಿದ್ದೇವೆ. ಎಲ್ಲರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಾಂಗ್ರೆಸ್‍ಗೆ ನಮ್ಮ ಯಾವ ಶಾಸಕರ ಮೇಲೂ ಅಪನಂಬಿಕೆ ಇಲ್ಲ.

ರಮೇಶ್ ಜಾರಕಿಹೊಳಿ ಅವರನ್ನು ಕೆಲವು ಶಾಸಕರು ಭೇಟಿಮಾಡಿದ ತಕ್ಷಣ ಅನುಮಾನ ಪಡಬೇಕಿಲ್ಲ. ಸದ್ಯಕ್ಕೆ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬರಗಾಲ ಇದೆ. ಕುಡಿಯುವ ನೀರು, ಮೇವು, ಜನರ ಉದ್ಯೋಗದ ಸಮಸ್ಯೆಗಳು ಕಾಡುತ್ತಿವೆ. ನಾವು ಆ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದೇವೆ.

ಸರ್ಕಾರ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಬೇಕು, ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ಒಳ್ಳೆಯ ಆಡಳಿತ ಕೊಡಬೇಕು ಎಂಬುದು ನಮ್ಮ ಆದ್ಯತೆ. ಸಮ್ಮಿಶ್ರ ಸರ್ಕಾರ ಆತಂಕದಲ್ಲಿದೆ, ಅತಂತ್ರದಲ್ಲಿದೆ ಎಂಬುದೆಲ್ಲ ಊಹಾಫೋಹ. ಸರ್ಕಾರ ಸುಭದ್ರವಾಗಿದೆ. ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

1 hour ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

1 hour ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago