ಬೆಂಗಳೂರು, -:ಕೆಲವರಿಗೆ ಅಧಿಕಾರ ಕೊಡುವ ಸಲುವಾಗಿ ಸಂಪುಟ ಪುನಾರಚಿಸಬೇಕು, ವಿಸ್ತರಣೆ ಮಾಡಬೇಕೆಂಬ ಪ್ರಶ್ನೆ ನಮ್ಮ ಮುಂದಿಲ್ಲ. ಜನ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಬಳಸಿಕೊಂಡು ಅಭಿವೃದ್ಧಿ ಕೆಲಸ ಮಾಡುವುದು ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎರಡರಲ್ಲಿ ಯಾವುದನ್ನು ಮಾಡಬೇಕೆಂಬ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಸಂಜೆ ಶಾಸಕಾಂಗ ಸಭೆ ಕರೆದಿದ್ದೇವೆ. ಎಲ್ಲರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕಾಂಗ್ರೆಸ್ಗೆ ನಮ್ಮ ಯಾವ ಶಾಸಕರ ಮೇಲೂ ಅಪನಂಬಿಕೆ ಇಲ್ಲ.
ರಮೇಶ್ ಜಾರಕಿಹೊಳಿ ಅವರನ್ನು ಕೆಲವು ಶಾಸಕರು ಭೇಟಿಮಾಡಿದ ತಕ್ಷಣ ಅನುಮಾನ ಪಡಬೇಕಿಲ್ಲ. ಸದ್ಯಕ್ಕೆ ಸರ್ಕಾರ ಸುಭದ್ರವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಬರಗಾಲ ಇದೆ. ಕುಡಿಯುವ ನೀರು, ಮೇವು, ಜನರ ಉದ್ಯೋಗದ ಸಮಸ್ಯೆಗಳು ಕಾಡುತ್ತಿವೆ. ನಾವು ಆ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದೇವೆ.
ಸರ್ಕಾರ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಬೇಕು, ಜನರ ಸಮಸ್ಯೆಗಳನ್ನು ಬಗೆಹರಿಸಬೇಕು. ಒಳ್ಳೆಯ ಆಡಳಿತ ಕೊಡಬೇಕು ಎಂಬುದು ನಮ್ಮ ಆದ್ಯತೆ. ಸಮ್ಮಿಶ್ರ ಸರ್ಕಾರ ಆತಂಕದಲ್ಲಿದೆ, ಅತಂತ್ರದಲ್ಲಿದೆ ಎಂಬುದೆಲ್ಲ ಊಹಾಫೋಹ. ಸರ್ಕಾರ ಸುಭದ್ರವಾಗಿದೆ. ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ಹೇಳಿದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…