ಬೆಂಗಳೂರು: ರಾಯಚೂರಿನಲ್ಲಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ವೈಟಿಪಿಎಸ್ ಸಿಬ್ಬಂದಿಗಳ ವಿರುದ್ಧ ಕಿಡಿ ಕಾರಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ವರ್ತನೆಯನ್ನು ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, “ಜನ ನಿಮಗೆ ಮತ ಹಾಕಿಲ್ಲ, ಮೋದಿಗೆ ಹಾಕಿದ್ದಾರೆ ಅನ್ನುವ ಸತ್ಯ ಒಪ್ಪಿಕೊಂಡಿದ್ದಕ್ಕೆ ಅಭಿನಂದನೆಗಳು. ಒಲ್ಲದ ಮುತ್ತೈದೆಯಂತೆ ಖುರ್ಚಿ ಮೇಲೆ ಕೂತು ಸಮಸ್ಯೆಗೆ ಪರಿಹಾರ ಕೇಳಿದರೆ ಲಾಠಿ ಚಾರ್ಜ್ ಮಾಡಿಸಬೇಕಾ ಅಂತ ಕೇಳುವ ನೀವೇ ಈ ರಾಜ್ಯದ ದೊಡ್ಡ ಸಮಸ್ಯೆ. ರಾಜೀನಾಮೆ ಕೊಟ್ಟು ಮನೆಗೆ ಹೋಗಿ, ರಾಜ್ಯದ ಜನತೆಯ ಆಶೀರ್ವಾದ ಬಿಜೆಪಿಗಿದೆ” ಎಂದು ಟ್ವೀಟ್ ಮಾಡಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕರೇಗುಡ್ಡಕ್ಕೆ ಬುಧವಾರ ಗ್ರಾಮವಾಸ್ತವ್ಯಕ್ಕಾಗಿ ಸಿಎಂ ತೆರಳುತ್ತಿದ್ದ ಸಾರಿಗೆ ಬಸ್ಸನ್ನು ಯರಮರಸ್ ಬಳಿ ಮುತ್ತಿಗೆ ಹಾಕಿದ ವೈಟಿಪಿಎಸ್ ಕಾರ್ಮಿಕರು, ಬಾಕಿ ವೇತನ ಪಾವತಿ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕೋಪಗೊಂಡ ಸಿಎಂ, ಮೋದಿಗೆ ವೋಟ್ ಹಾಕ್ತೀರ. ಕೆಲ್ಸಕ್ಕೆ ನಾನ್ ಬೇಕಾ? ಇದು ಕೇಳುವ ರೀತಿಯೇ? ನಿಮ್ಮ ಮೇಲೆ ಲಾಠಿ ಚಾರ್ಜ್ ಮಾಡಬೇಕಾ? ಎಂದು ಕಿಡಿ ಕಾರಿದ್ದರು. ಸಿಎಂ ಕುಮಾರಸ್ವಾಮಿ ಅವರ ಈ ಹೇಳಿಕೆ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…