ವಿಟ್ಲ,: ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಮಿಥುನ್ ರೈ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ ಸಾರ್ವಜನಿಕರೊಂದಿಗೆ ಮತಯಾಚಿಸಿದರು.
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ನಡೆಸಿ ಹೊರಬಂದ ಮಿಥುನ್ ರೈಯವರು ಪತ್ರಕರ್ತರೊಂದಿಗೆ ಮಾತನಾಡಿ ಜನ ಬದಲಾವಣೆಯನ್ನು ಬಯಸುತ್ತಿದ್ದಾರೆ.ಬದಲಾವಣೆಯ ವಾತಾವರಣ ಸೃಷ್ಟಿಯಾಗುತ್ತಿದೆ. ಜಿಲ್ಲೆಯ ಪ್ರಜ್ಞಾವಂತ ನಾಗರೀಕರಿಗೆ ಶೂನ್ಯ ಪ್ರಗತಿಯ ಜಿಲ್ಲೆಯಿಂದ ಪೂರ್ಣ ಪ್ರಗತಿಯ ಜಿಲ್ಲೆಯಾಗಬೇಕೆನ್ನುವ ನಿರೀಕ್ಷೆ ಇದೆ. ಯುವಕರ ಕಷ್ಟಕ್ಕೆ ಸಹಕಾರ ನೀಡುವ ಓರ್ವ ನಾಯಕ ಬೇಕೆನ್ನುವ ನಿರೀಕ್ಷೆ ಇದೆ. ಯುವಕರ ಧ್ವನಿಯಾಗಿ ಲೋಕಸಭೆಯಲ್ಲಿ ಸ್ಪಂದಿಸುವ ನಾಯಕರ ಕೊರತೆ ಇದೆ. ದ.ಕ ಜಿಲ್ಲೆಯ ಎಲ್ಲಾ ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸಿ ನನ್ನನ್ನು ಆಯ್ಕೆ ಮಾಡಿ ಅವರ ಕಷ್ಟಕ್ಕೆ ಸ್ಪಂದಿಸುವ ನಾಯಕನನ್ನಾಗಿ ಮಾಡುತ್ತಾರೆ ಎನ್ನುವ ಭರವಸೆ ಇದೆ ಎಂದರು.
ಮೇಗಿನ ಪೇಟೆಯಿಂದ ಆರಂಭಗೊಂಡ ಮೆರವಣಿಗೆಯೂ ಖಾಸಗಿ ಬಸ್ಸುನಿಲ್ದಾಣ, ಸಂತೆ ರಸ್ತೆ ಆಗಿ ಸರಕಾರಿ ಬಸ್ಸು ನಿಲ್ದಾಣದ ವರೆಗೆ ಸಾಗಿ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ಸಮಾಪ್ತಿ ಅಯಿತು. ಬಳಿಕ ಮಿಥುನ್ ರೈಯವರು ಬಳಿಕ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಶ್ರೀ ದೇವರ ದರ್ಶನ ಪಡೆದರು. ವಿಟ್ಲ ಅರಮನೆಯ ಕೃಷ್ಣಯ್ಯ ಕೆ ಸ್ವಾಗತಿಸಿದರು. ಬಳಿಕ ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಉಮ್ಮರ್ ಸಅದಿ ಅವರ ಹಾಗೂ ವಿಟ್ಲ ಶೋಕ ಮಾತಾ ಇಗರ್ಜಿಯಲ್ಲಿ ಧರ್ಮಗುರು ಎರಿಕ್ ಕ್ರಾಸ್ತಾ ಅವರ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…