Featured

ಜಪಾನ್‌ ಭೂಕಂಪ : ಒಂದೇ ದಿನ 155 ಬಾರಿ ಭೂಮಿ ಕಂಪನ, 13 ಮಂದಿ ಸಾವು – vishwanews24

ಜಪಾನ್‌ ಭೂಕಂಪ : ಒಂದೇ ದಿನ 155 ಬಾರಿ ಭೂಮಿ ಕಂಪನ, 13 ಮಂದಿ ಸಾವು

ಟೋಕಿಯೊ: ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ ಜಪಾನ್‌ನಲ್ಲಿ 13 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ ಭೂಕಂಪ ಸಂಭವಿಸಿ ಅಪಾರ ಸಾವು-ನೋವಿಗೆ ಕಾರಣವಾಗಿದೆ.

ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿವೆ.

ಜಪಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.

ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000 ಕುಟುಂಬಗಳು ವಿದ್ಯುತ್‌ ಸಮಸ್ಯೆಯಿಂದ ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.

ಭೂಕಂಪದ ತೀವ್ರತೆ 7.5ರಷ್ಟಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ತಿಳಿಸಿದೆ. ಜಪಾನ್‌ನ ಹವಾಮಾನ ಸಂಸ್ಥೆ ಇದನ್ನು 7.6 ಎಂದು ಹೇಳಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

20 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

21 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

22 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

23 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

23 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

23 hours ago