Featured

ಜಪಾನ್‌ ಭೂಕಂಪ : ಒಂದೇ ದಿನ 155 ಬಾರಿ ಭೂಮಿ ಕಂಪನ, 13 ಮಂದಿ ಸಾವು – vishwanews24

ಜಪಾನ್‌ ಭೂಕಂಪ : ಒಂದೇ ದಿನ 155 ಬಾರಿ ಭೂಮಿ ಕಂಪನ, 13 ಮಂದಿ ಸಾವು

ಟೋಕಿಯೊ: ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ ಜಪಾನ್‌ನಲ್ಲಿ 13 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ ಭೂಕಂಪ ಸಂಭವಿಸಿ ಅಪಾರ ಸಾವು-ನೋವಿಗೆ ಕಾರಣವಾಗಿದೆ.

ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿವೆ.

ಜಪಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.

ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000 ಕುಟುಂಬಗಳು ವಿದ್ಯುತ್‌ ಸಮಸ್ಯೆಯಿಂದ ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.

ಭೂಕಂಪದ ತೀವ್ರತೆ 7.5ರಷ್ಟಿತ್ತು ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ತಿಳಿಸಿದೆ. ಜಪಾನ್‌ನ ಹವಾಮಾನ ಸಂಸ್ಥೆ ಇದನ್ನು 7.6 ಎಂದು ಹೇಳಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

17 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

17 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

17 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago