ಮಂಗಳೂರು: ದೇವದಾಸ್ ಕಾಪಿಕಾಡ್ ನಿರ್ದೇಶಿಸಿರುವ ಅರ್ಜುನ್ ಕಾಪಿಕಾಡ್ ಅಭಿನಯದ ತುಳು ಸಿನೆಮಾ ‘ಜಬರ್ ದಸ್ತ್ ಶಂಕರ’ ಜಬರ್ ದಸ್ತ್ಆಗಿ ತೆರೆಯ ಮೇಲೆ ಬರಲು ಸಜ್ಜಾಗಿ ನಿಂತಿದೆ.
ನಿಶ್ಮಿತಾ ಹಾಗೂ ನೀತು ನಾಯಕಿಯರಾಗಿ ಅಭಿನಯಿಸಿರುವ ಈ ಸಿನೆಮಾ ನ.8ರ ಶುಕ್ರವಾರ ತೆರೆಗೆ ಬರಲಿದೆ.
ಜಲನಿಧಿ ಪ್ರೋಡಕ್ಷನ್ ಹಾಗೂ ಬೊಳ್ಳಿ ಮೂವೀಸ್ ಅರ್ಪಿಸುವ ಈ ಸಿನೆಮಾವನ್ನು ಅನಿಲ್ ಕುಮಾರ್ ಹಾಗೂ ಲೋಕೇಶ್ ಕೋಟ್ಯಾನ್ ನಿರ್ಮಿಸಿದ್ದಾರೆ.
ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರೇ ಕಥೆ, ಸಂಭಾಷಣೆ, ಸಾಹಿತ್ಯ ಬರೆದಿದ್ದು, ಮಾಸ್ ಮಾಸ ಸ್ಟಂಟ್ ಮಾಸ್ಟರ್ ಆಗಿದ್ದು, ಸಿದ್ದು ಛಾಯಾಗ್ರಹಣ ನಿರ್ವಹಿಸಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ.
ಸತೀಶ್ ಬಂದಳೆ, ಸಾಯ್ ಕೃಷ್ಣ ಕುಡ್ಲ, ದೇವದಾಸ್ ಕಾಪಿಕಾಡ್ ಮುಂತಾದ ಹಿರಿಯ ಕಲಾವಿದರು ಅಭಿನಯಿಸಿದ್ದಾರೆ.
ಇದೊಂದು ಥ್ರಿಲ್ಲರ್ ಅಥವ ರೋಮ್ಯಾಂಟಿಕ್ ಅಥವ ತುಳು ಕೊಮೆಡಿ ಚಿತ್ರವೇ ಎಂಬ ಚರ್ಚ್ ಶುರುವಾಗಿದೆ. ತುಳು ಸಿನಿಮಾ ಅಂದ್ರೆ ಹಾಸ್ಯ ಇರಲೇ ಬೇಕು. ಮಾಮೂಲಿ ಹಾಸ್ಯವಲ್ಲ. ರಸಭರಿತ ಹಾಸ್ಯ ಹೊನಲು ಇದ್ದೇ ಇರುತ್ತದೆ.
ಆದರೆ, ಯಾವ ಹೂರಣದ ಚಿತ್ರ ಎಂಬ ಬಗ್ಗೆ ಸಿನಿಮಾದ ಯಾವೊಬ್ಬರು ಕೂಡ ಮಾಹಿತಿ ಬಿಟ್ಟು ಕೊಡುತ್ತಿಲ್ಲ. ಸದ್ಯದಲ್ಲೇ ಟೀಸರ್ ಬಿಡುಗಡೆ ಮಾಡುತ್ತಿದ್ದೇವೆ ಎಂದಿದ್ದಾರೆ. ಕಡು ಹಳದಿ ಅಂಗಿ ಧರಿಸಿ ಫೈಟ್ ಪೋಸ್ ನೀಡಿರುವುದನ್ನು ಗಮನಿಸಿದರೆ ಅರ್ಜುನ್ ಕಾಫಿಕಾಡ್ ಯ್ಯಂಗ್ರಿ ಯಂಗ್ ಮ್ಯಾನ್ ಪೆಟ್ಟಿಸ್ಟ್ ಪಾತ್ರದಂತೆ ಕಾಣಿಸುತ್ತಿದೆ. ಬೇರೆ ಚಿತ್ರಗಳಿಗಿಂತ ಸ್ವಲ್ಪ ಹೆಚ್ಚೇ ಹೊಡೆದಾಟ ದೃಶ್ಯಗಳು ಇವೆ ಎಂದೂ ಹೇಳಲಾಗುತ್ತಿದೆ. ತುಳು ಚಿತ್ರರಂಗದಲ್ಲಿ ಬದಲಾವಣೆ ಗಾಳಿ ಆಗಲೇ ಬೀಸುತ್ತಿದ್ದು, ಜಬರ ದಸ್ತ್ ಶಂಕರ ಚಿತ್ರ ಕುತೂಹಲ ಹುಟ್ಟಿಸಿದೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…