Featured

ಜಮೀನು ಮಾರಿದ ಅಕ್ರಮವಾಗಿ ಅನುದಾನ ಪಡೆಯುತ್ತಿದ್ದ ‘ಪಿಎಂ ಕಿಸಾನ್ ಫಲಾನುಭವಿ’ಗಳಿಗೆ ಕೃಷಿ ಇಲಾಖೆ ಬಿಗ್ ಶಾಕ್ : ಅನುದಾನದ ಹಣ ವಾಪಾಸ್’ಗೆ ಕ್ರಮ – Vishwnaews24

ಜಮೀನು ಮಾರಿದ ಅಕ್ರಮವಾಗಿ ಅನುದಾನ ಪಡೆಯುತ್ತಿದ್ದ ‘ಪಿಎಂ ಕಿಸಾನ್ ಫಲಾನುಭವಿ’ಗಳಿಗೆ ಕೃಷಿ ಇಲಾಖೆ ಬಿಗ್ ಶಾಕ್ : ಅನುದಾನದ ಹಣ ವಾಪಾಸ್’ಗೆ ಕ್ರಮ

ಬೆಂಗಳೂರು: ಬೇರೆಯವರಿಗೆ ಜಮೀನು ಮಾರಾಟ ಮಾಡಿದ್ದರೂ, ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಅಕ್ರಮವಾಗಿ ಅನುದಾನ ಪಡೆಯುತ್ತಿದ್ದ ಸುಮಾರು 1.50 ಲಕ್ಷ ರೈತರಿಗೆ, ಕೃಷಿ ಇಲಾಖೆ ಬಿಗ್ ಶಾಕ್ ನೀಡಿದೆ. ಹೀಗೆ ಅಕ್ರಮವಾಗಿ ಅನುದಾನ ಪಡೆಯುತ್ತಿದ್ದವರನ್ನು ಪತ್ತೆ ಹಚ್ಚಿದ್ದು, ಪಾವತಿಸಿರುವಂತ ಅನುದಾನ ವಾಪಾಸ್ ವಸೂಲಿಗೂ ಮುಂದಾಗಿ, ಬಿಗ್ ಶಾಕ್ ನೀಡಿದೆ.

ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅನುದಾನ ಪಡೆಯುತ್ತಿರುವಂತ ರೈತರ ಸಂಖ್ಯೆ ಸುಮಾರು 53 ಲಕ್ಷಕ್ಕೂ ಹೆಚ್ಚು ಇದ್ದಾರೆ. ಇದೀಗ ಪಿಎಂ ಕಿಸಾನ್ ಯೋಜನೆಯ ಅನುದಾನ ಅಕ್ರಮ ತಡೆಗೆ ಕೇಂದ್ರ ಸರ್ಕಾರ ಖಡಕ್ ನಿರ್ದೇಶನ ನೀಡಿದೆ. ಹೀಗಾಗಿ ಕೃಷಿ ಇಲಾಖೆಯಿಂದ ಅಕ್ರಮ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ನಿಟ್ಟಿನಲ್ಲಿ ಆದಾಯ ತೆರಿಗೆ ಪಾವತಿಸುವವರೂ ಸೇರಿದಂತೆ ಅನರ್ಹರಿಗೆ ಹಣ ಪಾವತಿಯಾಗುತ್ತಿರುವ ಬಗ್ಗೆ ಪತ್ತೆ ಕಾರ್ಯಕ್ಕೆ ಇಳಿದಿದೆ. ಇದಲ್ಲದೇ ತಮ್ಮ ಜಮೀನು ಬೇರೆಯವರಿಗೆ ಮಾರಾಟ ಮಾಡುತ್ತಿದ್ದರೂ, ಅನುದಾನ ಪಡೆಯುತ್ತಿರುವಂತ 1.50 ಲಕ್ಷ ಜನರ ಬಗ್ಗೆಯೂ ಮಾಹಿತಿ ಕಲೆ ಹಾಕಿದೆ. ತಮ್ಮಲ್ಲಿರುವಂತ ಭೂಮಿ ತಂತ್ರಾಂಶ, ಪ್ರೊಟ್ ಐಡಿ ಮತ್ತಿತ್ತರ ದತ್ತಾಂಶ ಆಧರಿಸಿ, ಈಗ ಮತ್ತಷ್ಟು ಪರಿಶೀಲನೆಗೆ ತೊಡಗಿದೆ.

ಅಂದಹಾಗೇ ರಾಜ್ಯದಲ್ಲಿ 200ಕ್ಕೂ ಅಧಿಕ ರೈತರು ಮೃತಪಟ್ಟ ನಂತ್ರವೂ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಯಾಗಿದೆ. ಇಂತಹ ಸಂಬಂಧಪಟ್ಟವರಿಂದ ಮೊತ್ತ ವಸೂಲು ಮಾಡುವಂತೆ ಬ್ಯಾಂಕ್ ಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಈಗಾಗಲೇ ಮೃತ ರೈತರ ಕುಟುಂಬದಿಂದ 84 ಸಾವಿರ ರೂ ವಾಪಸ್ ಪಡೆಯಲಾಗಿದೆ ಎಂದು ಕೃಷಿ ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.

ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಮಾತನಾಡಿ, ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದೂ, ಬಳಿಕ ಜಮೀನು ಮಾರಾಟ ಮಾಡಿದ 1.5 ಲಕ್ಷ ಪ್ರಕರಣಗಳು ರಾಜ್ಯದಲ್ಲಿ ಪತ್ತೆ ಹಚ್ಚಲಾಗಿದೆ. ಇವರಿಗೆ ಹಣ ಸಂದಾಯ ಆಗುವುದನ್ನು ನಿಲ್ಲಿಸಲಾಗಿದೆ. ಮೃತಪಟ್ಟವರ ಬ್ಯಾಂಕ್ ಖಾತೆಗೂ ಹಣ ಪಾವತಿಯಾಗುವುದನ್ನು ತಡೆ ಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

18 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

19 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

19 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

20 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

22 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

22 hours ago