ತುಮಕೂರು: ‘ಮುಸ್ಲಿಮರು ಬಿಜೆಪಿಗೆ ಮತಹಾಕುವುದಿಲ್ಲ. ಒಂದು ವೇಳೆ ಯಾರಾದರೂ ಮತ ಹಾಕಿದರೆ ಅವರು ಮುಸ್ಲಿಮರೇ ಅಲ್ಲ.’ ಇದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹ್ಮದ್ ಅವರ ವಿವಾದಾತ್ಮಕ ಹೇಳಿಕೆ.
ಜಮೀರ್ ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು,ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ. ಆತ ಪಾಕಿಸ್ತಾನಕ್ಕೆ ಹೋಗಲಿ. ಭಾರತ ಆತನ ತಾತನ ಆಸ್ತಿಯಲ್ಲ ಎಂದು ಸಚಿವ ಜಮೀರ್ ಅಹಮದ್ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ.
ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸೊಗಡು ಶಿವಣ್ಣ ; ‘ಜನಪ್ರತಿನಿಧಿ ಆಗುವ ಯೋಗ್ಯತೆ ಜಮೀರ್ ಅವರಿಗೆ ಇಲ್ಲ. ವಿಧಾನಸಭಾ ಚುನಾವಣೆ ವೇಳೆ ಬಾಯಿಗೆ ಬಂದಂತೆ ಮಾತಾನಾಡಿದ್ದ ಅವರು, ಈಗ ಇಂತಹ ಹೇಳಿಕೆ ನೀಡಿದ್ದಾರೆ. ಜಮೀರ್ ಅವರು ಪದೇ ಪದೆ ಇಂತಹ ಹೇಳಿಕೆ ನೀಡುತ್ತಿದ್ದರೂ ಚುನಾವಣಾ ಆಯೋಗ ಮೌನವಹಿಸುತ್ತಿರುವುದು ಸರಿಯಲ್ಲ.ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರ ಬಾಯಿಯಲ್ಲಿ ಇಂತಹ ಹೇಳಿಕೆ ಬಂದಿರುವುದು ದುರದೃಷ್ಟಕರ. ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದೇವೆ ಎಂಬ ವಿವೇಚನೆಯೂ ಅವರಿಗಿಲ್ಲ. ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಹಿಂದು, ಮುಸ್ಲಿಂ ಜನರ ಭಾವನೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದರೂ ಚುನಾವಣಾ ಆಯೋಗ ಕೈಗೊಳ್ಳದಿರುವುದು ಸರಿಯಲ್ಲ ಎಂದರು.
ದೇಶ ವಿಭಜನೆಯಾದಾಗ ಮುಸ್ಲಿಂ ಬಾಂಧವರು 3 ಕೋಟಿ ಇದ್ದರು. ಇದೀಗ 20 ಕೋಟಿ ಆಗಿದ್ದಾರೆ. ನಾವು ಅವರನ್ನ ಅಣ್ಣ ತಮ್ಮಂದಿರೆಂದು ಸಹಿಸಿಕೊಂಡಿದ್ದೇವೆ. ಮೊಘಲರು, ಬ್ರಿಟಿಷರು ಆಳ್ವಿಕೆ ನಡೆಸಿದ್ದರೂ ನಮ್ಮ ಸಂಸ್ಕೃತಿ ಹಾಳಾಗಿರಲಿಲ್ಲ. ಆದರೆ ನಮ್ಮಲ್ಲಿರುವ ಕಿಡಿಗೇಡಿಗಳು, ಪಾಪಿಗಳಿಂದ ನಮ್ಮ ಹಿಂದೂ ಸಮಾಜವನ್ನು ಒಡೆಯುತ್ತಿದ್ದಾರೆ. ನಮ್ಮ ಬಂಧು, ನಮ್ಮ ಸಂಸ್ಕೃತಿಯನ್ನು ಹಾಳು ಮಾಡುವ ಯಾವನೇ ವ್ಯಕ್ತಿ ಇದ್ದರೂ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಜಮೀರ್ ಅವರ ಹೇಳಿಕೆಗಳು ರಾಜ್ಯ ಸರ್ಕಾರಕ್ಕೆ ಕಪ್ಪು ಚುಕ್ಕಿಯಾಗುತ್ತಿವೆ ರಾಜ್ಯದ ಜನರ ನಡುವೆ ವಿಷ ಬೀಜ ಬಿತ್ತುತ್ತಿರುವ ಜಮೀರ್ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು.’ಎಂದು ತಿಳಿಸಿದ್ದಾರೆ..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…