Featured

ಜಮೀರ್ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು.’; ಆತ ಪಾಕಿಸ್ತಾನಕ್ಕೆ ಹೋಗಲಿ, ಭಾರತ ಆತನ ತಾತನ ಆಸ್ತಿಯಲ್ಲ : ಸೊಗಡು ಶಿವಣ್ಣ

ತುಮಕೂರು: ‘ಮುಸ್ಲಿಮರು ಬಿಜೆಪಿಗೆ ಮತಹಾಕುವುದಿಲ್ಲ. ಒಂದು ವೇಳೆ ಯಾರಾದರೂ ಮತ ಹಾಕಿದರೆ ಅವರು ಮುಸ್ಲಿಮರೇ ಅಲ್ಲ.’ ಇದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಮೀರ್ ಅಹ್ಮದ್ ಅವರ ವಿವಾದಾತ್ಮಕ ಹೇಳಿಕೆ.

ಜಮೀರ್ ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದು,ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಮಾಜಿ ಸಚಿವ ಸೊಗಡು ಶಿವಣ್ಣ ಆಗ್ರಹಿಸಿದ್ದಾರೆ. ಆತ ಪಾಕಿಸ್ತಾನಕ್ಕೆ ಹೋಗಲಿ. ಭಾರತ ಆತನ ತಾತನ ಆಸ್ತಿಯಲ್ಲ ಎಂದು ಸಚಿವ ಜಮೀರ್ ಅಹಮದ್ ವಿರುದ್ಧ ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸೊಗಡು ಶಿವಣ್ಣ ; ‘ಜನಪ್ರತಿನಿಧಿ ಆಗುವ ಯೋಗ್ಯತೆ ಜಮೀರ್ ಅವರಿಗೆ ಇಲ್ಲ. ವಿಧಾನಸಭಾ ಚುನಾವಣೆ ವೇಳೆ ಬಾಯಿಗೆ ಬಂದಂತೆ ಮಾತಾನಾಡಿದ್ದ ಅವರು, ಈಗ ಇಂತಹ ಹೇಳಿಕೆ ನೀಡಿದ್ದಾರೆ. ಜಮೀರ್ ಅವರು ಪದೇ ಪದೆ ಇಂತಹ ಹೇಳಿಕೆ ನೀಡುತ್ತಿದ್ದರೂ ಚುನಾವಣಾ ಆಯೋಗ ಮೌನವಹಿಸುತ್ತಿರುವುದು ಸರಿಯಲ್ಲ.ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಸಚಿವರ ಬಾಯಿಯಲ್ಲಿ ಇಂತಹ ಹೇಳಿಕೆ ಬಂದಿರುವುದು ದುರದೃಷ್ಟಕರ. ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದೇವೆ ಎಂಬ ವಿವೇಚನೆಯೂ ಅವರಿಗಿಲ್ಲ. ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಹಿಂದು, ಮುಸ್ಲಿಂ ಜನರ ಭಾವನೆಗೆ ಧಕ್ಕೆ ತರುವಂತ ಹೇಳಿಕೆ ನೀಡಿದ್ದರೂ ಚುನಾವಣಾ ಆಯೋಗ ಕೈಗೊಳ್ಳದಿರುವುದು ಸರಿಯಲ್ಲ  ಎಂದರು.

ದೇಶ ವಿಭಜನೆಯಾದಾಗ ಮುಸ್ಲಿಂ ಬಾಂಧವರು 3 ಕೋಟಿ ಇದ್ದರು. ಇದೀಗ 20 ಕೋಟಿ ಆಗಿದ್ದಾರೆ. ನಾವು ಅವರನ್ನ ಅಣ್ಣ ತಮ್ಮಂದಿರೆಂದು ಸಹಿಸಿಕೊಂಡಿದ್ದೇವೆ. ಮೊಘಲರು, ಬ್ರಿಟಿಷರು ಆಳ್ವಿಕೆ ನಡೆಸಿದ್ದರೂ ನಮ್ಮ ಸಂಸ್ಕೃತಿ ಹಾಳಾಗಿರಲಿಲ್ಲ. ಆದರೆ ನಮ್ಮಲ್ಲಿರುವ ಕಿಡಿಗೇಡಿಗಳು, ಪಾಪಿಗಳಿಂದ ನಮ್ಮ ಹಿಂದೂ ಸಮಾಜವನ್ನು ಒಡೆಯುತ್ತಿದ್ದಾರೆ. ನಮ್ಮ ಬಂಧು, ನಮ್ಮ ಸಂಸ್ಕೃತಿಯನ್ನು ಹಾಳು ಮಾಡುವ ಯಾವನೇ ವ್ಯಕ್ತಿ ಇದ್ದರೂ ಅವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಜಮೀರ್ ಅವರ ಹೇಳಿಕೆಗಳು ರಾಜ್ಯ ಸರ್ಕಾರಕ್ಕೆ ಕಪ್ಪು ಚುಕ್ಕಿಯಾಗುತ್ತಿವೆ ರಾಜ್ಯದ ಜನರ ನಡುವೆ ವಿಷ ಬೀಜ ಬಿತ್ತುತ್ತಿರುವ ಜಮೀರ್ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು.’ಎಂದು ತಿಳಿಸಿದ್ದಾರೆ..

 

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

15 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

15 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

16 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

16 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

16 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

17 hours ago