ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

Featured, ರಾಜ್ಯ ನ್ಯೂಸ್

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ ಪಕ್ಷದ ಹಿರಿಯ ಮುಖಂಡರು. ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಅಲ್ಲದೆ, ಝಮೀರ್‌ ಅವರು ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಪ್ರಚಾರ ಮಾಡಿದ್ದರು” ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ದಾವಣಗೆರೆ ಉಪಚುನಾವಣೆ ವಿಚಾರವಾಗಿ ಸಚಿವ ಝಮೀರ್‌ ಅಹ್ಮದ್‌ ಅವರ ತಲೆದಂಡ ಆಗುತ್ತೆ ಎಂಬ ಚರ್ಚೆ ಕುರಿತ ಮಾಧ್ಯಮದವರ ಪ್ರಶ್ನಗೆ ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.

ಇದನ್ನೂ ಓದಿ:

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಸಿಎಂ ಸಿದ್ದರಾಮಯ್ಯ ಮುಂದಿನ ಐದು ವರ್ಷಗಳ ಕಾಲ ಆಡಳಿತ ಮುಂದುವರಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿ, “ಅದು ನಮ್ಮ ವೈಯಕ್ತಿಕ ಬೇಡಿಕೆ. ರಾಜ್ಯದ ಜನರಿಗೆ ಒಳ್ಳೆಯದಾಗಬೇಕು ಎನ್ನುವುದೇ ಮುಖ್ಯ. ಐದು ವರ್ಷ ಪೂರೈಸುವ ಬಗ್ಗೆ ಸಿಎಂ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಹೆಚ್ಚಿನ ಮಾತಿಲ್ಲ,” ಎಂದರು.

ಸಚಿವ ಸಂಪುಟ ಪುನರ್ ರಚನೆ ಕುರಿತು ಮಾತನಾಡಿದ ಅವರು, “ಪ್ರತಿ ಸರ್ಕಾರದಲ್ಲೂ ಅರ್ಧ ಅವಧಿ ಬಳಿಕ ಸಂಪುಟ ಪುನರ್ ರಚನೆ ಆಗುವುದು ಸಾಮಾನ್ಯ. ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅಂತಿಮ ನಿರ್ಧಾರ ಪಕ್ಷದ ವರಿಷ್ಠರದು,” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

Leave a Reply