ಮೈಸೂರು: ಶಾಸಕ ಜಮೀರ್ ಅಹ್ಮದ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಗಲಭೆ ನಡೆದ ಎಲ್ಲಾ ಕಡೆ ಜಮೀರ್ ಅಹ್ಮದ್ ಏಕೆ ಹೋಗುತ್ತಾರೆ? ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಪುಂಡ ಮುಸಲ್ಮಾನರ ಹೆಸರು ಹೇಳದಂತೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮೇಲೆ ಒತ್ತಡ ಹಾಕಲಾಗುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಸ್ಲೀಪರ್ ಸೆಲ್ಗಳು ಆಯಕ್ಟೀವ್ ಆಗಿವೆ. ಕೇರಳ ಮಾದರಿಯಲ್ಲಿ ರಾಜಕೀಯ ಹತ್ಯೆಗೆ ಸಂಚು ನಡೆಯುತ್ತಿದೆ. ಇದು ಎಸ್ ಡಿಪಿಐ, ಕೆಎಫ್ ಡಿ ಮೂಲಕ ರಾಜ್ಯಕ್ಕೆ ಕೇರಳ ಮಾದರಿ ಕಾಲಿಟ್ಟಿದೆ. ಕಾಂಗ್ರೆಸ್ ಪಕ್ಷದವರು ಇದನ್ನು ಮಟ್ಟ ಹಾಕುವ ಪ್ರಯತ್ನದ ಬದಲು ಪೋಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
ಎಸ್ ಡಿಪಿಐ ನಿಷೇಧ ವಿಚಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವೇದನೆಯಾಗುತ್ತಿದೆ. ಎಸ್ ಡಿಪಿಐ ವಿರುದ್ಧದ 175 ಪ್ರಕರಣಗಳನ್ನು 2015ರಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ವಾಪಾಸ್ ಪಡೆದಿದ್ದು ಯಾಕೆ? ಹಾಲಿ ನ್ಯಾಯಧೀಶರಿಂದ ತನಿಖೆಗೆ ಒತ್ತಾಯ ಮಾಡುವುದು ತನಿಖೆ ವಿಳಂಬವಾಗುವಂತೆ ನೋಡಿಕೊಂಡು ವ್ಯವಸ್ಥಿತವಾಗಿ ಎಸ್ ಡಿಪಿಐ ರಕ್ಷಣೆ ಮಾಡುವುದು ಸಿದ್ದರಾಮಯ್ಯ ಅವರ ಪ್ಲ್ಯಾನ್. ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಪರಿಶಿಷ್ಟ ಜಾತಿಯವರನ್ನು ಮಟ್ಟ ಹಾಕುವ ಕೆಲಸ ಮಾಡಿದ್ದಾರೆ. ಅವರಿಗೆ ನಿರಂತರವಾಗಿ ಒಳ ಏಟು ಕೊಟ್ಟಿದ್ದಾರೆ ಎಂದು ಪ್ರತಾಪ್ ಸಿಂಹ ಆರೋಪಿಸಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…