ಬೆಂಗಳೂರು: ಶಾಸಕರಾದ ಜಮೀರ್ ಅಹ್ಮದ್ ಖಾನ್ ಎಲ್ಲವನ್ನೂ ಕಾನೂನಿನ ಚೌಕಟ್ಟಿನಲ್ಲಿಯೇ ಎದುರಿಸುತ್ತಾರೆ. ಕಾನೂನು ಪ್ರಕಾರ ಎದುರಿಸಲು ಶಾಸಕರು ಸಮರ್ಥರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶಾಸಕ ಜಮೀರ್ ಅಹ್ಮದ್ ಇಡಿ ದಾಳಿ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದರು. ವಿಧಾನಸೌಧದಲ್ಲಿಯೇ ಶ್ರೀನಿವಾಸ್ ಗೌಡರು ಮೂವತ್ತು ಕೋಟಿಯ ಆರೋಪಗಳನ್ನು ಮಾಡಿದರು. ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ 9 ಕೋಟಿ ತಂದು ಸರ್ಕಾರ ರಚನೆ ಮಾಡಿದರು ಅಂತ ಅವರೇ ಹೇಳಿದ್ದರು. ಆದ್ರೆ ಇವರ ಮೇಲೆಲ್ಲ ದಾಳಿ ನಡೀತಾ? ಐಟಿ, ಎಸಿಬಿಯಲ್ಲಿ ಪ್ರಕರಣ ದಾಖಲಾಯ್ತಾ? ಆಪರೇಷನ್ ಕಮಲದ ವೇಳೆ ಯಾರ ಮೇಲೆ ದಾಳಿ ನಡೀತಾ? ಬಿಜೆಪಿಯಲ್ಲಿರೋರು ಪರಿಶುದ್ಧರಾ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದರು.
ಎರಡು ವರ್ಷದ ಹಿಂದೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಎಲ್ಲದಕ್ಕೂ ಉತ್ತರ ಕೊಟ್ಟಿದ್ದೆ ಎಂದು ಜಮೀರ್ ಹೇಳಿದ್ದರು. ಈಗ ದಾಳಿ ನಡೆಯುವ ಅವಶ್ಯಕತೆ ಇರಲಿಲ್ಲ. ಈಗ ಕಿರುಕುಳ ನೀಡುತ್ತಿರೋದು ಯಾಕೆ? ಈ ಕಿರುಕುಳ ಹೇಗೆ ಇರುತ್ತೆ ನಂಗೂ ಗೊತ್ತಿದೆ. ಈಗ ತೊಂದರೆ ಕೊಡುತ್ತಿರುವುದು ಸರಿ ಇಲ್ಲ. ಯಾರ ಅನಕೂಲಕ್ಕೆ ಈ ದಾಳಿ ನಡೆದಿದೆ ಗೊತ್ತಿಲ್ಲ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…