ಬೆಂಗಳೂರು: ಶಾಸಕರಾದ ಜಮೀರ್ ಅಹ್ಮದ್ ಖಾನ್ ಎಲ್ಲವನ್ನೂ ಕಾನೂನಿನ ಚೌಕಟ್ಟಿನಲ್ಲಿಯೇ ಎದುರಿಸುತ್ತಾರೆ. ಕಾನೂನು ಪ್ರಕಾರ ಎದುರಿಸಲು ಶಾಸಕರು ಸಮರ್ಥರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶಾಸಕ ಜಮೀರ್ ಅಹ್ಮದ್ ಇಡಿ ದಾಳಿ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದರು. ವಿಧಾನಸೌಧದಲ್ಲಿಯೇ ಶ್ರೀನಿವಾಸ್ ಗೌಡರು ಮೂವತ್ತು ಕೋಟಿಯ ಆರೋಪಗಳನ್ನು ಮಾಡಿದರು. ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ 9 ಕೋಟಿ ತಂದು ಸರ್ಕಾರ ರಚನೆ ಮಾಡಿದರು ಅಂತ ಅವರೇ ಹೇಳಿದ್ದರು. ಆದ್ರೆ ಇವರ ಮೇಲೆಲ್ಲ ದಾಳಿ ನಡೀತಾ? ಐಟಿ, ಎಸಿಬಿಯಲ್ಲಿ ಪ್ರಕರಣ ದಾಖಲಾಯ್ತಾ? ಆಪರೇಷನ್ ಕಮಲದ ವೇಳೆ ಯಾರ ಮೇಲೆ ದಾಳಿ ನಡೀತಾ? ಬಿಜೆಪಿಯಲ್ಲಿರೋರು ಪರಿಶುದ್ಧರಾ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದರು.
ಎರಡು ವರ್ಷದ ಹಿಂದೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಎಲ್ಲದಕ್ಕೂ ಉತ್ತರ ಕೊಟ್ಟಿದ್ದೆ ಎಂದು ಜಮೀರ್ ಹೇಳಿದ್ದರು. ಈಗ ದಾಳಿ ನಡೆಯುವ ಅವಶ್ಯಕತೆ ಇರಲಿಲ್ಲ. ಈಗ ಕಿರುಕುಳ ನೀಡುತ್ತಿರೋದು ಯಾಕೆ? ಈ ಕಿರುಕುಳ ಹೇಗೆ ಇರುತ್ತೆ ನಂಗೂ ಗೊತ್ತಿದೆ. ಈಗ ತೊಂದರೆ ಕೊಡುತ್ತಿರುವುದು ಸರಿ ಇಲ್ಲ. ಯಾರ ಅನಕೂಲಕ್ಕೆ ಈ ದಾಳಿ ನಡೆದಿದೆ ಗೊತ್ತಿಲ್ಲ ಎಂದರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…