ಬೆಳಗಾವಿ: ಜಮೀರ್ ಅಹ್ಮದ್ ಖಾನ್ ಅವರು ನಮ್ಮ ಪಕ್ಷದ ಉನ್ನತ ನಾಯಕ. ಅವರನ್ನು ನೀವು ಎಲ್ಲಾ ರೀತಿಯಿಂದ ಬೆಳೆಸಬೇಕು. ಅವರು ನಮ್ಮ ಪಕ್ಷದ ಬಾಹುಬಲಿ. ತಮ್ಮದೇ ಆದ ಶಕ್ತಿಯನ್ನು ಹೊಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜಮೀರ್ ಅಹ್ಮದ್ ಖಾನ್ ಅವರನ್ನು ಹೊಗಳಿದರು.
ನಗರದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು, ಆಗಸ್ಟ್ 3 ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬವನ್ನು ದಾವಣಗೆರೆಯಲ್ಲಿ ಮಾಡುತ್ತಿದ್ದೇವೆ. ಬೆಂಗಳೂರಿನಿಂದ ನಮಗೆ ಆಹ್ವಾನ ನೀಡಲು ಜಮೀರ್ ಬಂದಿದ್ದಾರೆ. ನಮ್ಮ ಪಕ್ಷದ ಉನ್ನತ ನಾಯಕ ಜಮೀರ್ ಅಹ್ಮದ್ ಎಂದು ಕೊಂಡಾಡಿದರು.
9 ತಿಂಗಳಲ್ಲಿ ಚುನಾವಣೆ ಬರ್ತಾ ಇದೆ. ಈ ಚುನಾವಣೆಯಲ್ಲಿ ನೀವೆಲ್ಲಾ ಒಗ್ಗಟ್ಟಾಗಬೇಕು. ಬರುವ ಚುನಾವಣೆಯಲ್ಲಿ ಗಟ್ಟಿಯಾಗಿರಬೇಕು. ಜಾಫರ್ ಶರೀಫ್ ನಂತರ ಮತ್ತೊಬ್ಬ ಮುಸ್ಲಿಂ ನಾಯಕರಾಗಲು ಜಮೀರ್ಗೆ ಅವಕಾಶವಿದೆ. ಎಲ್ಲೇ ಹೋದರೂ 5-10 ಲಕ್ಷ ರೂ. ಜಮೀರ್ ಜೇಬಿನಲ್ಲಿರುತ್ತದೆ. ವಾಪಸ್ ಹೋಗುವಾಗ ಖಾಲಿ ಜೇಬಿನಿಂದ ಹೋಗುತ್ತಾರೆ. ನಾವು ಅಷ್ಟು ಹಣ ಇಟ್ಟುಕೊಳ್ಳುವುದಿಲ್ಲ. ಇಡಿ, ಐಟಿ ನಿಮ್ಮ ಹಿಂದೆ ಬಿದ್ದಿದೆ ಎಂದರೆ ನಿಮ್ಮ ಜೊತೆಗೆ ಪಕ್ಷ ಮತ್ತು ಸಮುದಾಯವಿದೆ. ಮುಂದಿನ ದಿನಗಳಲ್ಲಿ ಅಚ್ಚೇ ದಿನ್ ಬರುತ್ತದೆ. ನೀವು ಕಾಯಬೇಕು ಎಂದರು.
ನಿಮ್ಮ ಶಕ್ತಿ ಕಾಂಗ್ರೆಸ್ ಶಕ್ತಿ. ಎಲ್ಲರೂ ಒಗ್ಗಟ್ಟಾಗಿರಬೇಕು. ಮುಂದಿನ ದಿನಗಳಲ್ಲಿ ಜಮೀರ್ ಅಹ್ಮದ್ ಬೆಳಗಾವಿಗೆ ಆಗಮಿಸುತ್ತಾರೆ. ನಿಮಗೂ ಒಬ್ಬರು ಲೀಡರ್ ಅಂತ ಬೇಕಾಗುತ್ತದೆ. ಹೀಗಾಗಿ ಜಮೀರ್ ಬರ್ತಾರೆ. ಎಲ್ಲಾ ಕಡೆ ಸಭೆಗಳನ್ನು ಮಾಡುತ್ತಾರೆ. ಅಲ್ಪಸಂಖ್ಯಾತ ಸಮುದಾಯದಿಂದ ಜಮೀರ್ ಅಹ್ಮದ್ ನಾವು ಕೂಡ ಮುಖ್ಯಮಂತ್ರಿ ಆಕಾಂಕ್ಷಿ ಎಂದಿದ್ದಾರೆ ಎಂದು ತಿಳಿಸಿದರು.
ನಮಗೂ ಸಾಕಷ್ಟು ಜನ ಕೇಳುತ್ತಾರೆ. ಆದರೆ ನಮ್ಮ ಸರದಿ ಇನ್ನೂ ದೂರ ಇದೆ. ದಿಲ್ಲಿ ಅಬಿ ದೂರ್ ಹೈ. ನಮ್ಮದು ಸಿಎಂ ಕುರ್ಚಿಗಾಗಿ ಲಡಾಯಿ ಇಲ್ಲ. ಈಗ ನಮ್ಮ ಜನರಿಗೆ ಸಮಾನತೆ ಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಇದೆ. ಈಗ ನಮ್ಮದು ಕುರ್ಚಿಗಾಗಿ ಫೈಟ್ ಇಲ್ಲ ಎಂದು ಹೇಳಿದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…