ಮಂಗಳೂರು:ಜಮ್ಮು- ಕಾಶ್ಮೀರದಲ್ಲಿ ಅನ್ಯ ರಾಜ್ಯದವರು ಆಸ್ತಿ ಖರೀದಿಸಲು ಇದ್ದ ನಿಷೇಧ ತೆರವುಗೊಳಿಸಿರುವ ಹಿನ್ನೆಲ್ಲೆಯಲ್ಲಿಕರಾವಳಿ ಮೂಲದ ದುಬೈ ಉದ್ಯಮಿ ಬಿ.ಆರ್. ಶೆಟ್ಟಿಜಮ್ಮು- ಕಾಶ್ಮೀರದಲ್ಲಿ ಬೃಹತ್ ಫಿಲ್ಮ್ ಸಿಟಿಯೊಂದನ್ನು ಆರಂಭಿಸಲು ಉದ್ದೇಶಿಸಿದ್ದಾರೆ.
ಅರಬ್ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಬಿ.ಆರ್.ಶೆಟ್ಟಿ, ‘ಜಮ್ಮು- ಕಾಶ್ಮೀರ ಅತ್ಯಂತ ರಮಣೀಯ ಸ್ಥಳವಾಗಿದ್ದು, ನಾನು ಅಲ್ಲಿ ಫಿಲ್ಮ್ ಸಿಟಿಯೊಂದನ್ನು ಆರಂಭಿಸಲಿದ್ದೇನೆ. ಜನರು ಅಲ್ಲಿಗೆ ಬಂದು ಚಿತ್ರಗಳನ್ನು ಚಿತ್ರೀಕರಿಸಬಹುದು. ನನಗೆ ಈಗಾಗಲೇ ಜಮ್ಮು- ಕಾಶ್ಮೀರ ಮತ್ತು ಲಡಾಖ್ನಲ್ಲಿ ಸುಮಾರು 3,000 ಎಕರೆಯಷ್ಟುಜಾಗ ನೀಡುವುದಾಗಿ ಆಫರ್ಗಳು ಬಂದಿವೆ’ ಎಂದು ಹೇಳಿದ್ದಾರೆ.
ಆಗಸ್ಟ್ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುಎಇಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಜಮ್ಮು- ಕಾಶ್ಮೀರದಲ್ಲಿ 7 ಸಾವಿರ ಕೋಟಿ ರು. ಹೂಡಿಕೆ ಮಾಡುವುದಾಗಿ ಬಿ.ಆರ್. ಶೆಟ್ಟಿಪ್ರಕಟಿಸಿದ್ದರು.
ಸಂವಿಧಾನದ 35ಎ ವಿಧಿ ಕಾಶ್ಮೀರದ ಜನರಿಗೆ ವಿಶೇಷ ಸೌಲಭ್ಯ ಕಲ್ಪಿಸಿತ್ತು. ಕಾಶ್ಮಿರದ ನಿವಾಸಿಗಳನ್ನು ಹೊರತುಪಡಿಸಿ ಅನ್ಯ ರಾಜ್ಯದವರು ಆಸ್ತಿಗಳನ್ನು ಖರೀದಿಸಲು ಅವಕಾಶ ಇರಲಿಲ್ಲ. ಆದರೆ, ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ಹಾಗೂ 35ಎ ವಿಧಿಯನ್ನು ರದ್ದುಗೊಳಿಸಿರುವುದರಿಂದ ಕಾಶ್ಮೀರದಲ್ಲಿ ಹೂಡಿಕೆ ಮತ್ತು ಆಸ್ತಿ ಖರೀದಿಗೆ ಅವಕಾಶ ಇದೆ. ಜಮ್ಮು- ಕಾಶ್ಮೀರದಲ್ಲಿ ರೆಸಾರ್ಟ್ ಆರಂಭಿಸುವ ಬಗ್ಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಘೋಷಣೆ ಮಾಡಿವೆ.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…