Featured

ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ :  ಸ್ವಾಗತಾರ್ಹ ನಡೆ – vishwanews24

ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ :  ಸ್ವಾಗತಾರ್ಹ ನಡೆ – vishwanews24

ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶ ಮಾಡಿದ ಎರಡು ವರ್ಷಗಳ ತರುವಾಯ ಅಲ್ಲಿನ 14 ರಾಜಕೀಯ ನಾಯಕರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತುಕತೆ ನಡೆಸಿದ್ದು, ಒಂದು ರೀತಿಯಲ್ಲಿ ಇದು ಫ‌ಲಪ್ರದವಾಗಿದೆ. ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡದಿದ್ದರೂ ಸರಿಯಾದ ಸಮಯದಲ್ಲಿ ವಾಪಸ್‌ ನೀಡಲಾಗುವುದು ಎಂದು ಮೋದಿ ಅವರು ನೀಡಿದ ಭರವಸೆ ಕೆಲಸ ಮಾಡಿದೆ. ಇದಕ್ಕೆ ಅಲ್ಲಿನ ವಿಪಕ್ಷಗಳು ಸಮ್ಮತಿ ಸೂಚಿಸಿದ್ದು, ಕೇಂದ್ರ ಸರಕಾರ ಮತ್ತು ಜಮ್ಮು ಕಾಶ್ಮೀರದ ರಾಜಕೀಯ ಪಕ್ಷಗಳು ಒಂದು ದೋಣಿಗೆ ಕಾಲಿಟ್ಟಂತಾಗಿದೆ.

ಮಾತುಕತೆ ವೇಳೆ ಪ್ರಮುಖವಾಗಿ ಚರ್ಚೆಗೆ ಬಂದಿದ್ದು, ವಿಧಾನಸಭೆ ಕ್ಷೇತ್ರಗಳ ಪುನರ್ವಿಂಗಡಣೆ ವಿಷಯ. 1995-96ರಲ್ಲಿ ಇಲ್ಲಿ ಪುನರ್ವಿಂಗಡಣೆಯಾಗಿದ್ದು ಬಿಟ್ಟರೆ, ಮತ್ತೆ ಆಗಿಲ್ಲ. ಹೀಗಾಗಿ ಮೊದಲಿಗೆ ವಿಧಾನಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಮಾಡಿ ಬಳಿಕ ವಿಧಾನಸಭೆ ಚುನಾವಣೆ ನಡೆಸುವುದು ಕೇಂದ್ರ ಸರಕಾರದ ಇರಾದೆ. ಆದರೆ ಮೊದಲಿಗೆ ವಿಪಕ್ಷಗಳು ಆಕ್ಷೇಪವೆತ್ತಿದರೂ ಅನಂತರದಲ್ಲಿ ಇದಕ್ಕೆ ಒಪ್ಪಿಗೆ ನೀಡಿವೆ.

ಈಗ ಕೇಂದ್ರ ಸರಕಾರ ವಿಧಾನಸಭೆ ಚುನಾವಣೆ ನಡೆಸಲು ಮುಂದಾಗಿರುವುದರ ಹಿಂದೆ ಬೇರೆ ಬೇರೆ ಕಾರಣಗಳು ಇವೆ. ಸದ್ಯ ಅಮೆರಿಕದಲ್ಲಿ ಸರಕಾರ ಬದಲಾಗಿದ್ದು, ಅಲ್ಲಿ ಟ್ರಂಪ್‌ ಬದಲಿಗೆ ಜೋ ಬೈಡೆನ್‌ ಬಂದಿದ್ದಾರೆ. ಟ್ರಂಪ್‌ ಗಿಂತಲೂ ಜೋ ಬೈಡೆನ್‌ ಮತ್ತವರ ಪಕ್ಷಕ್ಕೆ ಕಾಶ್ಮೀರದ ವಿದ್ಯಮಾನಗಳು ಹೆಚ್ಚು ಆಸಕ್ತಿಕರ. ಹಾಗೆಯೇ ಪಾಕಿಸ್ಥಾನದ ಚಾಡಿ ಮಾತು ಕೂಡ. ಈ ಬಗ್ಗೆ ಮುಂದೊಂದು ದಿನ ಅಮೆರಿಕದಲ್ಲಿ ಪ್ರಸ್ತಾವವಾಗಲೂಬಹುದು. ಹೀಗಾಗಿಯೇ ಅಲ್ಲಿ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇರಿಸಿಕೊಂಡೇ, ಕೆಲವು ಷರತ್ತುಗಳೊಂದಿಗೆ ಆಡಳಿತ ಮಾಡುತ್ತಿದ್ದೇವೆ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೇಳಲು ಅನುಕೂಲವಾಗುತ್ತದೆ.

ಇವೆಲ್ಲದಕ್ಕಿಂತ ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸುವುದು ಇಂದಿನ ಅತ್ಯಗತ್ಯದ ವಿಚಾರವಾಗಿದೆ. ಮೊದಲಿದ್ದ ಹಾಗೆ, ಈಗ ಭಾರೀ ಪ್ರಮಾಣದಲ್ಲಿ ಉಗ್ರ ಚಟುವಟಿಕೆಗಳು ನಡೆಯುತ್ತಿಲ್ಲ. ಹಾಗೆಯೇ ಕಲ್ಲುತೂರಾಟದಂಥ ಪ್ರಕರಣಗಳು, ಗಲಭೆಗಳು ಹತೋಟಿಗೆ ಬಂದಿವೆ. ಇಂಥ ಸಮಯದಲ್ಲಿ ಚುನಾವಣೆ ನಡೆಸಿದರೆ ಅಲ್ಲಿನ ಜನ ಕೇಂದ್ರ ಸರಕಾರದ ಮೇಲೆ ನಂಬಿಕೆ ಇರಿಸಲು ಸಹಾಯವಾಗುತ್ತದೆ. ಅದರಲ್ಲೂ ಆದಷ್ಟು ಬೇಗನೇ ಈ ಪ್ರಕ್ರಿಯೆ ಮುಗಿಯಬೇಕು. ಒಮ್ಮೆ ಇಲ್ಲಿ ಜನರಿಂದಲೇ ಸ್ಥಾಪಿತ ಸರಕಾರ ಬಂದು ಬಿಟ್ಟರೆ, ಜನ ಮತ್ತು ಸರಕಾರದ ನಡುವೆ ಸಂಪರ್ಕ ಹೆಚ್ಚಿ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲು ಸಹಕಾರಿಯಾಗುತ್ತದೆ.

ಇನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯದ ಸ್ಥಾನಮಾನ ನೀಡಬೇಕು ಎಂಬ ಅಲ್ಲಿನ ರಾಜಕೀಯ ಪಕ್ಷಗಳ ಮನವಿ  ಒಪ್ಪುವಂಥದ್ದೇ. ಕೇಂದ್ರಾಡಳಿತ ಪ್ರದೇಶವೊಂದರ ಸರಕಾರಕ್ಕೂ ಸಂಪೂರ್ಣ ರಾಜ್ಯ ಸ್ಥಾನಮಾನವಿರುವ ಸರಕಾರಕ್ಕೂ ವ್ಯತ್ಯಾಸವಿದೆ. ಹೀಗಾಗಿ ಎಲ್ಲ ಅಧಿಕಾರಗಳು ರಾಜ್ಯ ಸರಕಾರಗಳ ಬಳಿಯೇ ಇರಬೇಕು ಎಂದು ಕೇಳುವುದು ನ್ಯಾಯೋಚಿತ. ಇದಕ್ಕೆ ಪ್ರಧಾನಿ ಮೋದಿಯವರು ಸರಿಯಾದ ಸಮಯದಲ್ಲಿ ರಾಜ್ಯ ಸ್ಥಾನಮಾನ ನೀಡುತ್ತೇವೆ ಎಂದು ಹೇಳಿರುವುದು ಉಚಿತವೇ ಆಗಿದೆ. ಸದ್ಯ ಇರುವ ಎಲ್ಲ ಅಡೆತಡೆಗಳನ್ನು ಮೀರಿದ ಮೇಲೆ ಅಲ್ಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ಸಿಗಲೂ ಬಹುದು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

10 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

10 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

11 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

14 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

14 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

14 hours ago