ನ್ಯೂಯಾರ್ಕ್ : ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ 370 ವಿಧೇಯಕವನ್ನು ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕಾಪಾಡುವಂತೆ ಭಾರತ ಮತ್ತು ಪಾಕಿಸ್ತಾನದ ಸರ್ಕಾರಗಳಿಗೆ ವಿಶ್ವಸಂಸ್ಥೆ ತಾಕೀತು ಮಾಡಿದೆ.
ಮುಂದಿನ ದಿನಗಳಲ್ಲಿ ಈ ವಿವಾದ ಮತ್ತಷ್ಟು ಕಾವು ಪಡೆದು ಹಿಂಸಾಚಾರ ನಡೆಯುವ ಸೂಚನೆಯನ್ನೂ ನೀಡಿದೆ. ಭಾರತದ ಈ ನಡೆಯನ್ನು ಈಗಾಗಲೇ ವಿರೋಧಿಸಿರುವ ಪಾಕಿಸ್ತಾನದ ಸರ್ಕಾರ ಇಂದು ಪಾಕ್ ರಾಜಧಾನಿ ಇಸ್ಲಾಮಾಬಾದ್ ನಲ್ಲಿ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಲು ಮುಂದಾಗಿದೆ. ಜಮ್ಮು-ಕಾಶ್ಮೀರದ ಕುರಿತಾದ ಈ ಎರಡೂ ದೇಶಗಳ ನಡೆಯಿಂದ ಕಣಿವೆ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೇಳುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿ ಕಾಣುತ್ತಿವೆ.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎರಡೂ ದೇಶಗಳಿಗೆ ಸೂಚನೆ ನೀಡಿರುವ ವಿಶ್ವಸಂಸ್ಥೆ ಹಾಗೂ ಅಮೆರಿಕಾ ಜಮ್ಮು-ಕಾಶ್ಮೀರ ಭಾಗದಲ್ಲಿ ಶಾಂತಿ ಕಾಪಾಡುವಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಪಾಲಿಸುವಂತೆ ತಾಕೀತು ಮಾಡಿದೆ.
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ವಿಧೇಯಕವನ್ನು ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದರು. ಪರಿಣಾಮ ಕಣಿವೆ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಡೀ ರಾಜ್ಯದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಪ್ರಮುಖ ರಾಜಕೀಯ ನಾಯಕರನ್ನು ಬಂಧನದಲ್ಲಿಡಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…