ನ್ಯೂಯಾರ್ಕ್ : ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ 370 ವಿಧೇಯಕವನ್ನು ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕಾಪಾಡುವಂತೆ ಭಾರತ ಮತ್ತು ಪಾಕಿಸ್ತಾನದ ಸರ್ಕಾರಗಳಿಗೆ ವಿಶ್ವಸಂಸ್ಥೆ ತಾಕೀತು ಮಾಡಿದೆ.
ಮುಂದಿನ ದಿನಗಳಲ್ಲಿ ಈ ವಿವಾದ ಮತ್ತಷ್ಟು ಕಾವು ಪಡೆದು ಹಿಂಸಾಚಾರ ನಡೆಯುವ ಸೂಚನೆಯನ್ನೂ ನೀಡಿದೆ. ಭಾರತದ ಈ ನಡೆಯನ್ನು ಈಗಾಗಲೇ ವಿರೋಧಿಸಿರುವ ಪಾಕಿಸ್ತಾನದ ಸರ್ಕಾರ ಇಂದು ಪಾಕ್ ರಾಜಧಾನಿ ಇಸ್ಲಾಮಾಬಾದ್ ನಲ್ಲಿ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಲು ಮುಂದಾಗಿದೆ. ಜಮ್ಮು-ಕಾಶ್ಮೀರದ ಕುರಿತಾದ ಈ ಎರಡೂ ದೇಶಗಳ ನಡೆಯಿಂದ ಕಣಿವೆ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೇಳುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿ ಕಾಣುತ್ತಿವೆ.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎರಡೂ ದೇಶಗಳಿಗೆ ಸೂಚನೆ ನೀಡಿರುವ ವಿಶ್ವಸಂಸ್ಥೆ ಹಾಗೂ ಅಮೆರಿಕಾ ಜಮ್ಮು-ಕಾಶ್ಮೀರ ಭಾಗದಲ್ಲಿ ಶಾಂತಿ ಕಾಪಾಡುವಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಪಾಲಿಸುವಂತೆ ತಾಕೀತು ಮಾಡಿದೆ.
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ವಿಧೇಯಕವನ್ನು ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದರು. ಪರಿಣಾಮ ಕಣಿವೆ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಡೀ ರಾಜ್ಯದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಪ್ರಮುಖ ರಾಜಕೀಯ ನಾಯಕರನ್ನು ಬಂಧನದಲ್ಲಿಡಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…