Featured

ಜಮ್ಮು-ಕಾಶ್ಮೀರದಲ್ಲಿ ಶಾಂತಿ ಕಾಪಾಡಿ ; ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳಿಗೆ ವಿಶ್ವಸಂಸ್ಥೆ -Vishwanews24

ನ್ಯೂಯಾರ್ಕ್ : ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ 370 ವಿಧೇಯಕವನ್ನು ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಕಾಪಾಡುವಂತೆ ಭಾರತ ಮತ್ತು ಪಾಕಿಸ್ತಾನದ ಸರ್ಕಾರಗಳಿಗೆ ವಿಶ್ವಸಂಸ್ಥೆ ತಾಕೀತು ಮಾಡಿದೆ.

ಮುಂದಿನ ದಿನಗಳಲ್ಲಿ ಈ ವಿವಾದ ಮತ್ತಷ್ಟು ಕಾವು ಪಡೆದು ಹಿಂಸಾಚಾರ ನಡೆಯುವ ಸೂಚನೆಯನ್ನೂ ನೀಡಿದೆ. ಭಾರತದ ಈ ನಡೆಯನ್ನು ಈಗಾಗಲೇ ವಿರೋಧಿಸಿರುವ ಪಾಕಿಸ್ತಾನದ ಸರ್ಕಾರ ಇಂದು ಪಾಕ್ ರಾಜಧಾನಿ ಇಸ್ಲಾಮಾಬಾದ್ ನಲ್ಲಿ ಸರ್ವ ಪಕ್ಷಗಳ ಸಭೆ ಕರೆದು ಚರ್ಚಿಸಲು ಮುಂದಾಗಿದೆ. ಜಮ್ಮು-ಕಾಶ್ಮೀರದ ಕುರಿತಾದ ಈ ಎರಡೂ ದೇಶಗಳ ನಡೆಯಿಂದ ಕಣಿವೆ ರಾಜ್ಯದಲ್ಲಿ ಮತ್ತೆ ಹಿಂಸಾಚಾರ ಭುಗಿಲೇಳುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿ ಕಾಣುತ್ತಿವೆ.

ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎರಡೂ ದೇಶಗಳಿಗೆ ಸೂಚನೆ ನೀಡಿರುವ ವಿಶ್ವಸಂಸ್ಥೆ ಹಾಗೂ ಅಮೆರಿಕಾ ಜಮ್ಮು-ಕಾಶ್ಮೀರ ಭಾಗದಲ್ಲಿ ಶಾಂತಿ ಕಾಪಾಡುವಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಪಾಲಿಸುವಂತೆ ತಾಕೀತು ಮಾಡಿದೆ.

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ವಿಧೇಯಕವನ್ನು ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯಸಭೆಯಲ್ಲಿ ಮಂಡಿಸಿದರು. ಪರಿಣಾಮ ಕಣಿವೆ ರಾಜ್ಯದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಇಡೀ ರಾಜ್ಯದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು, ಪ್ರಮುಖ ರಾಜಕೀಯ ನಾಯಕರನ್ನು ಬಂಧನದಲ್ಲಿಡಲಾಗಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago