ಅಂತಾರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದ ಸರ್ಕಾರ ಪತನ : ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಮೈತ್ರಿಗೆ ಗುಡ್ ಬೈ ಹೇಳಿದ ಬಿಜೆಪಿ..

ಜಮ್ಮು ಕಾಶ್ಮೀರದ ರಾಜ್ಯ ಸರ್ಕಾರ ಪತನವಾಗಿದೆ. ಭಾರತೀಯ ಜನತಾ ಪಕ್ಷ ಹಾಗೂ ಪಿಡಿಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿತ್ತು. ಆದರೆ ಭಾರತೀಯ ಜನತಾ ಪಕ್ಷ ಇದೀಗ ಪಿಡಿಪಿಗೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದಿದ್ದು, ಸರ್ಕಾರ ಪತನವಾಗಿದೆ. ಭಾರತೀಯ ಜನತಾ ಪಕ್ಷ ಬೆಂಬಲವನ್ನು ಹಿಂಪಡೆದ ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಂಜೆ ಪಿಡಿಪಿ ತುರ್ತು ಸಭೆ ಕರೆದಿದ್ದು ತನ್ನ ಮುಂದಿನ ರಾಜಕೀಯ ನಿಲುವನ್ನು ಪ್ರಕಟಿಸಲಿದೆ. ಮೂರು ವರ್ಷಗಳ ಹಿಂದೆ ನಡೆದಂತಹ ಚುನಾವಣೆಯಲ್ಲಿ ಪಿಡಿಪಿ ಗೆ ಭಾರತೀಯ ಜನತಾ ಪಕ್ಷ ಬೆಂಬಲ ಘೋಷಿಸಿ ಮೈತ್ರಿ ಸರ್ಕಾರವನ್ನು ರಚಿಸಿತ್ತು. ಆದರೆ ಇದೀಗ ಭಾರತೀಯ ಜನತಾ ಪಕ್ಷ ರಾಜ್ಯಪಾಲರಿಗೆ ಪತ್ರವನ್ನು ರವಾನಿಸಿದ್ದು, ಮೆಹಬೂಬಾ ಮುಫ್ತಿಯವರಿಗೆ ನೀಡಿದ್ದಂತಹ ಬೆಂಬಲವನ್ನು ಹಿಂಪಡೆದಿರುವುದಾಗಿ ಘೋಷಿಸಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಜಮ್ಮು ಕಾಶ್ಮೀರದ ಬಿಜೆಪಿ ಪ್ರತಿನಿಧಿ ರಾಮ ಮಾಧವ್ ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬೆಂಬಲ ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಂತಹ ಸಭೆಯಲ್ಲಿ ಈ ನಿರ್ಧಾರ ಹೊರ ಬಿದ್ದಿದೆ ಎನ್ನಲಾಗಿದೆ .

ಪಿಡಿಪಿ ಜೊತೆ ಮೈತ್ರಿ ಮುಂದುವರಿಸುವುದು ಕಷ್ಟ ಸಾಧ್ಯವಾಗಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸರ್ವ ಪ್ರಯತ್ನವನ್ನು ಮಾಡುತ್ತಿದೆ. ಆದರೆ ಪಿಡಿಪಿ ಸಹಕರಿಸುತ್ತಿಲ್ಲ. ಹಲವಾರು ಅಭಿವೃದ್ಧಿ ಕಾರ್ಯಗಳಿಗೂ ಕೂಡ ಸರ್ಕಾರದಲ್ಲಿರುವ ಸಚಿವರುಗಳೇ ಅಡ್ಡ ಗಳನ್ನು ಹಾಕುತ್ತಿದ್ದಾರೆ. ಸಚಿವರುಗಳ ಪ್ರತಿಯೊಂದು ನಿರ್ಧಾರಗಳಲ್ಲೂ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇಂದು ಜಮ್ಮು ಕಾಶ್ಮೀರದಲ್ಲಿ ಮೂಲಭೂತವಾದಿಗಳು ಹಾಗೂ ಭಯೋತ್ಪಾದಕರು ಅಟ್ಟಹಾಸ ಮೆರೆಯುತ್ತಿದ್ದಾರೆ ಇತ್ತೀಚೆಗೆ ನಡೆದಿದ್ದ ಪತ್ರಕರ್ತರ ಕೊಲೆಯೇ ಇದಕ್ಕೆ ಸಾಕ್ಷಿ ಎಂದು ರಾಮ ಮಾಧವ್ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 hour ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

2 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

2 hours ago

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ – vishwanews24

ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…

2 hours ago

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ – vishwanews24

ಬೆಂಗಳೂರು: ಡೇ ಕೇರ್‌ ಸೆಂಟರ್‌ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…

3 hours ago