ಅಂತಾರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದ ಸರ್ಕಾರ ಪತನ : ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಮೈತ್ರಿಗೆ ಗುಡ್ ಬೈ ಹೇಳಿದ ಬಿಜೆಪಿ..

ಜಮ್ಮು ಕಾಶ್ಮೀರದ ರಾಜ್ಯ ಸರ್ಕಾರ ಪತನವಾಗಿದೆ. ಭಾರತೀಯ ಜನತಾ ಪಕ್ಷ ಹಾಗೂ ಪಿಡಿಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿತ್ತು. ಆದರೆ ಭಾರತೀಯ ಜನತಾ ಪಕ್ಷ ಇದೀಗ ಪಿಡಿಪಿಗೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದಿದ್ದು, ಸರ್ಕಾರ ಪತನವಾಗಿದೆ. ಭಾರತೀಯ ಜನತಾ ಪಕ್ಷ ಬೆಂಬಲವನ್ನು ಹಿಂಪಡೆದ ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಂಜೆ ಪಿಡಿಪಿ ತುರ್ತು ಸಭೆ ಕರೆದಿದ್ದು ತನ್ನ ಮುಂದಿನ ರಾಜಕೀಯ ನಿಲುವನ್ನು ಪ್ರಕಟಿಸಲಿದೆ. ಮೂರು ವರ್ಷಗಳ ಹಿಂದೆ ನಡೆದಂತಹ ಚುನಾವಣೆಯಲ್ಲಿ ಪಿಡಿಪಿ ಗೆ ಭಾರತೀಯ ಜನತಾ ಪಕ್ಷ ಬೆಂಬಲ ಘೋಷಿಸಿ ಮೈತ್ರಿ ಸರ್ಕಾರವನ್ನು ರಚಿಸಿತ್ತು. ಆದರೆ ಇದೀಗ ಭಾರತೀಯ ಜನತಾ ಪಕ್ಷ ರಾಜ್ಯಪಾಲರಿಗೆ ಪತ್ರವನ್ನು ರವಾನಿಸಿದ್ದು, ಮೆಹಬೂಬಾ ಮುಫ್ತಿಯವರಿಗೆ ನೀಡಿದ್ದಂತಹ ಬೆಂಬಲವನ್ನು ಹಿಂಪಡೆದಿರುವುದಾಗಿ ಘೋಷಿಸಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಜಮ್ಮು ಕಾಶ್ಮೀರದ ಬಿಜೆಪಿ ಪ್ರತಿನಿಧಿ ರಾಮ ಮಾಧವ್ ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬೆಂಬಲ ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಂತಹ ಸಭೆಯಲ್ಲಿ ಈ ನಿರ್ಧಾರ ಹೊರ ಬಿದ್ದಿದೆ ಎನ್ನಲಾಗಿದೆ .

ಪಿಡಿಪಿ ಜೊತೆ ಮೈತ್ರಿ ಮುಂದುವರಿಸುವುದು ಕಷ್ಟ ಸಾಧ್ಯವಾಗಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸರ್ವ ಪ್ರಯತ್ನವನ್ನು ಮಾಡುತ್ತಿದೆ. ಆದರೆ ಪಿಡಿಪಿ ಸಹಕರಿಸುತ್ತಿಲ್ಲ. ಹಲವಾರು ಅಭಿವೃದ್ಧಿ ಕಾರ್ಯಗಳಿಗೂ ಕೂಡ ಸರ್ಕಾರದಲ್ಲಿರುವ ಸಚಿವರುಗಳೇ ಅಡ್ಡ ಗಳನ್ನು ಹಾಕುತ್ತಿದ್ದಾರೆ. ಸಚಿವರುಗಳ ಪ್ರತಿಯೊಂದು ನಿರ್ಧಾರಗಳಲ್ಲೂ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇಂದು ಜಮ್ಮು ಕಾಶ್ಮೀರದಲ್ಲಿ ಮೂಲಭೂತವಾದಿಗಳು ಹಾಗೂ ಭಯೋತ್ಪಾದಕರು ಅಟ್ಟಹಾಸ ಮೆರೆಯುತ್ತಿದ್ದಾರೆ ಇತ್ತೀಚೆಗೆ ನಡೆದಿದ್ದ ಪತ್ರಕರ್ತರ ಕೊಲೆಯೇ ಇದಕ್ಕೆ ಸಾಕ್ಷಿ ಎಂದು ರಾಮ ಮಾಧವ್ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

14 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

14 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

14 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

15 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

15 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

15 hours ago