ಅಂತಾರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರದ ಸರ್ಕಾರ ಪತನ : ರಾಷ್ಟ್ರದ ಭದ್ರತೆಯ ದೃಷ್ಟಿಯಿಂದ ಮೈತ್ರಿಗೆ ಗುಡ್ ಬೈ ಹೇಳಿದ ಬಿಜೆಪಿ..

ಜಮ್ಮು ಕಾಶ್ಮೀರದ ರಾಜ್ಯ ಸರ್ಕಾರ ಪತನವಾಗಿದೆ. ಭಾರತೀಯ ಜನತಾ ಪಕ್ಷ ಹಾಗೂ ಪಿಡಿಪಿ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿತ್ತು. ಆದರೆ ಭಾರತೀಯ ಜನತಾ ಪಕ್ಷ ಇದೀಗ ಪಿಡಿಪಿಗೆ ನೀಡಿರುವ ಬೆಂಬಲವನ್ನು ವಾಪಸ್ ಪಡೆದಿದ್ದು, ಸರ್ಕಾರ ಪತನವಾಗಿದೆ. ಭಾರತೀಯ ಜನತಾ ಪಕ್ಷ ಬೆಂಬಲವನ್ನು ಹಿಂಪಡೆದ ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಂಜೆ ಪಿಡಿಪಿ ತುರ್ತು ಸಭೆ ಕರೆದಿದ್ದು ತನ್ನ ಮುಂದಿನ ರಾಜಕೀಯ ನಿಲುವನ್ನು ಪ್ರಕಟಿಸಲಿದೆ. ಮೂರು ವರ್ಷಗಳ ಹಿಂದೆ ನಡೆದಂತಹ ಚುನಾವಣೆಯಲ್ಲಿ ಪಿಡಿಪಿ ಗೆ ಭಾರತೀಯ ಜನತಾ ಪಕ್ಷ ಬೆಂಬಲ ಘೋಷಿಸಿ ಮೈತ್ರಿ ಸರ್ಕಾರವನ್ನು ರಚಿಸಿತ್ತು. ಆದರೆ ಇದೀಗ ಭಾರತೀಯ ಜನತಾ ಪಕ್ಷ ರಾಜ್ಯಪಾಲರಿಗೆ ಪತ್ರವನ್ನು ರವಾನಿಸಿದ್ದು, ಮೆಹಬೂಬಾ ಮುಫ್ತಿಯವರಿಗೆ ನೀಡಿದ್ದಂತಹ ಬೆಂಬಲವನ್ನು ಹಿಂಪಡೆದಿರುವುದಾಗಿ ಘೋಷಿಸಿದೆ.

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಜಮ್ಮು ಕಾಶ್ಮೀರದ ಬಿಜೆಪಿ ಪ್ರತಿನಿಧಿ ರಾಮ ಮಾಧವ್ ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಬೆಂಬಲ ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಂತಹ ಸಭೆಯಲ್ಲಿ ಈ ನಿರ್ಧಾರ ಹೊರ ಬಿದ್ದಿದೆ ಎನ್ನಲಾಗಿದೆ .

ಪಿಡಿಪಿ ಜೊತೆ ಮೈತ್ರಿ ಮುಂದುವರಿಸುವುದು ಕಷ್ಟ ಸಾಧ್ಯವಾಗಿದೆ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸರ್ವ ಪ್ರಯತ್ನವನ್ನು ಮಾಡುತ್ತಿದೆ. ಆದರೆ ಪಿಡಿಪಿ ಸಹಕರಿಸುತ್ತಿಲ್ಲ. ಹಲವಾರು ಅಭಿವೃದ್ಧಿ ಕಾರ್ಯಗಳಿಗೂ ಕೂಡ ಸರ್ಕಾರದಲ್ಲಿರುವ ಸಚಿವರುಗಳೇ ಅಡ್ಡ ಗಳನ್ನು ಹಾಕುತ್ತಿದ್ದಾರೆ. ಸಚಿವರುಗಳ ಪ್ರತಿಯೊಂದು ನಿರ್ಧಾರಗಳಲ್ಲೂ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇಂದು ಜಮ್ಮು ಕಾಶ್ಮೀರದಲ್ಲಿ ಮೂಲಭೂತವಾದಿಗಳು ಹಾಗೂ ಭಯೋತ್ಪಾದಕರು ಅಟ್ಟಹಾಸ ಮೆರೆಯುತ್ತಿದ್ದಾರೆ ಇತ್ತೀಚೆಗೆ ನಡೆದಿದ್ದ ಪತ್ರಕರ್ತರ ಕೊಲೆಯೇ ಇದಕ್ಕೆ ಸಾಕ್ಷಿ ಎಂದು ರಾಮ ಮಾಧವ್ ತಿಳಿಸಿದ್ದಾರೆ.

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

36 minutes ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

44 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

52 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 hour ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

3 hours ago