ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು, ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಸಹಿತ ಐವರು ಮೃತ ಪಟ್ಟಿದ್ದಾರೆ.
ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು.
ಗುರುವಾರ ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಕಲ್ಪಿಸಲಾಗುತ್ತದೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆ:
ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಕಣಿವೆಗೆ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…