Featured

ಜಮ್ಮು ಕಾಶ್ಮೀರ‌ : ಕಂದಕಕ್ಕೆ ಉರುಳಿದ ಸೇನಾ ಟ್ರಕ್​; ಕುಂದಾಪುರ ಬೀಜಾಡಿಯ ಯೋಧ ಅನೂಪ್ ಪೂಜಾರಿ ಹುತಾತ್ಮ – vishwanews24

ಜಮ್ಮು ಕಾಶ್ಮೀರ‌ : ಕಂದಕಕ್ಕೆ ಉರುಳಿದ ಸೇನಾ ಟ್ರಕ್​; ಕುಂದಾಪುರ ಬೀಜಾಡಿಯ ಯೋಧ ಅನೂಪ್ ಪೂಜಾರಿ ಹುತಾತ್ಮ

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು, ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಸಹಿತ ಐವರು ಮೃತ ಪಟ್ಟಿದ್ದಾರೆ.

ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಆಗಮಿಸಿದ್ದ ಅವರು ಮಗಳ ಹುಟ್ಟುಹಬ್ಬವನ್ನು ಆಚರಿಸಿದ್ದರು.

ಗುರುವಾರ ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ಕರೆತಂದು ಸಕಲ ವಿಧಿಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಕಲ್ಪಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಘಟನೆ ಹಿನ್ನೆಲೆ:

ಮಂಗಳವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಕಣಿವೆಗೆ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇದರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

18 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

18 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

19 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

20 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

21 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

21 hours ago