Featured

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ 28 ಸಾವಿರ ಸೈನಿಕರ ನಿಯೋಜನೆ -Vishwanews24

ಶ್ರೀನಗರ: ಒಂದೇ ವಾರದಲ್ಲಿ ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ 25 ಸಾವಿರ ಸೈನಿಕರನ್ನು ನಿಯೋಜನೆ ಮಾಡಲಾಗಿದೆ.

ವಾರಗಳ ಹಿಂದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ 2 ದಿನಗಳ ಕಾಶ್ಮೀರ ಭೇಟಿಯಲ್ಲಿದ್ದರು. ದೋವಲ್ ಹಿಂದಿರುಗಿದ ಬಳಿಕ ಈ ಬೆಳವಣಿಗೆಗಳು ನಡೆದಿದ್ದು, ಕುತೂಹಲ ಕೆರಳಿಸಿದೆ.

ಇನ್ನು ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ಸಂಬಂಧಿಸಿದ ಕಲಂ 370 ಮತ್ತು 35ಎ ಕುರಿತಂತೆ ಭಾರಿ ವಿರೋಧ ವ್ಯಕ್ತವಾಗುತ್ತಿರುವ ಹೊತ್ತಿನಲ್ಲೇ ಕೇಂದ್ರ ಸರ್ಕಾರ ಈ ನಡೆ ಅಚ್ಚರಿ ಮೂಡಿಸಿದೆ. ವಾರದ ಹಿಂದೆಯಷ್ಟೇ 10 ಸಾವಿರ ಅರೆಸೇನಾ ಪಡೆಗಳನ್ನು ಕಾಶ್ಮೀರಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ಮತ್ತೆ ಕಾಶ್ಮೀರಕ್ಕೆ ಮತ್ತೆ 28 ಸಾವಿರ ಸೈನಿಕರನ್ನು ಕಳುಹಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕರು, ಉತ್ತರ ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಸಂಖ್ಯೆ ತೀರಾ ಕಡಿಮೆ ಇದ್ದು, ಹೆಚ್ಚಿನ ಸಿಬ್ಬಂದಿಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

ಇನ್ನು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರೂ ಕೂಡ ಭೇಟಿ ನೀಡಲಿದ್ದು, ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ. ಅಷ್ಟು ಮಾತ್ರವಲ್ಲದೆ ಇಂದು ಮತ್ತು ನಾಳೆ ಅಂದರೆ 2 ದಿನಗಳ ಕಾಲ ಕಾಶ್ಮೀರದಲ್ಲೇ ಉಳಿದು ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಆದರೆ ಇದಕ್ಕೆ ಯಾವುದೇ ಕಾರಣಗಳನ್ನು ಸೇನೆಯಾಗಲಿ, ಸರ್ಕಾರವಾಗಲಿ ನೀಡಿಲ್ಲ. ಮೂಲಗಳ ಪ್ರಕಾರ ಅಮರನಾಥ ಯಾತ್ರಾರ್ಥಿಗಳ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಆದರೂ ಇಷ್ಟೊಂದು ಸೈನಿಕರನ್ನುಅಮರನಾಥ ಯಾತ್ರೆಗೆ ನಿಯೋಜಿಸಿದ ಉದಾಹರಣೆಗಳೇ ಇಲ್ಲ ಎಂದು ತಿಳಿದುಬಂದಿದೆ. ಇನ್ನು ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾತುಗಳೂ ಕೇಳಿಬರುತ್ತಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago