Featured

ಜರ್ಮನಿ ಭಾರತೀಯರಿಂದ ‘2024 ಒನ್ಸ್‌ಮೋರ್‌ ಮೋದಿ’ ಜಯಘೋಷ – Vishwanews24

ಜರ್ಮನಿ ಭಾರತೀಯರಿಂದ ‘2024 ಒನ್ಸ್‌ಮೋರ್‌ ಮೋದಿ’ ಜಯಘೋಷ

ಬರ್ಲಿನ್: ಜರ್ಮನಿಯ ಬರ್ಲಿನ್‌ಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರಮೋದಿ ಅವರು ಜರ್ಮನಿಯ ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸಹ-ಅಧ್ಯಕ್ಷತೆಯಲ್ಲಿ ಬರ್ಲಿನ್‌ನಲ್ಲಿ ಕಾರ್ಯಕ್ರಮ ನಡೆಯಿತು.

ಬರ್ಲಿನ್‌ನ ಮುಖ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಷಣ ಮಾಡಲು ವೇದಿಕೆಗೆ ಬರುತ್ತಿದ್ದಂತೆ ಅಲ್ಲಿ ನೆಲೆಸಿರುವ ಭಾರತೀಯರು `2024 ಒನ್ಸ್ಮೋರ್ ಮೋದಿ’ (2024ರ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು) ಎಂದು ಜಯಘೋಷ ಕೂಗಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮೆಲ್ಲರನ್ನು ನೋಡಿ ತುಂಬಾ ಸಂತೋಷವಾಗುತ್ತಿದೆ. ಯುವಸಮೂಹವೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇನ್ನಷ್ಟು ಖುಷಿ ನೀಡಿದೆ ಎಂದರು.

ಈ ಹಿಂದೆ ವಿದೇಶಿಯರ ಆಳ್ವಿಕೆಯಿಂದ ದೇಶ ತನ್ನ ಸ್ವಾಭಿಮಾನವನ್ನೇ ಕಳೆದುಕೊಂಡಿತ್ತು. ಇಂದು ಅಭಿವೃದ್ಧಿಯ ಆದಿಯಲ್ಲಿ ಮುನ್ನಡೆಯುತ್ತಿದೆ. ದೇಶದ ಸಂಪನ್ಮೂಲದಲ್ಲಿ ಎಂದಿಗೂ ಕೊರತೆಯಾಗುವುದಿಲ್ಲ ಎಂದೂ ಅವರು ಹೇಳಿದರು.

ಮುಂದುವರಿದು, ಯಾವುದೇ ಸುಧಾರಣೆಗೆ ರಾಜಕೀಯ ಇಚ್ಛಾಶಕ್ತಿ ಬೇಕು. ಇಂದು ಭಾರತದಲ್ಲಿ ಜೀವನ ಗುಣಮಟ್ಟ, ಶಿಕ್ಷಣದ ಗುಣಮಟ್ಟ ಸೇರಿದಂತೆ ಎಲ್ಲ ಕ್ಷೇತ್ರಗಳೂ ಮುನ್ನಡೆಯುತ್ತಿವೆ. ಅಧಿಕಾರ ಶಾಹಿಯಾಗಿದ್ದ ಕಚೇರಿಗಳು ಉತ್ತಮ ಫಲಿತಾಂಶವನ್ನು ಪಡೆಯುತ್ತಿವೆ. ಸರ್ಕಾರ ತನ್ನ ಸುಧಾರಣೆಗಳ ಮೂಲಕ ದೇಶವನ್ನು ಪರಿವರ್ತಿಸುತ್ತಿದೆ ಎಂದು ತಿಳಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

16 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago