ಪುಣೆ : ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಡ್ಯಾಂ ಬಳಿ ಇಡೀ ಒಂದು ಕುಟುಂಬವೇ ನೀರಿನಲ್ಲಿ ಕೊಚ್ಚಿ ಹೋದ ಕುಟುಂಬದ ದುರಂತ ಹಸಿರಾಗಿರುವಂತೆಯೇ, ಮತ್ತದೇ ಮಹಾರಾಷ್ಟ್ರದಲ್ಲಿ ಮತ್ತೊಂದು ದುರಂತ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ತಮ್ಹಿನಿ ಘಾಟ್ ನಲ್ಲಿ ಜಲಪಾತದಲ್ಲಿ ಈ ಘಟನೆ ನಡೆದಿದ್ದು, ತುಂಬಿ ಹರಿಯುತ್ತಿದ್ದ ಜಲಪಾತದಲ್ಲಿ ಈಜಲು ಹೋದ ಯುವಕನೋರ್ವ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾನೆ. ಯುವಕ ನೀರಿಗೆ ಜಿಗಿದು ಈಜಿ ಮೇಲೆ ಬರಲಾಗದೇ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ನೀರಿನಲ್ಲಿ ಕೊಚ್ಚಿಕೊಂಡು ಹೋದ ಯುವಕನನ್ನು ಸ್ವಪ್ನಿಲ್ ಧಾವ್ಡೆ ಎಂದು ಗುರುತಿಸಲಾಗಿದ್ದು, ಈತ ತನ್ನ ಇತರ 32 ಮಂದಿ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ. ಈ ವೇಳೆ ತಮ್ಹಿನಿ ಘಾಟ್ ನ ಅಪಾಯಕಾರಿ ಜಲಪಾತದಲ್ಲಿ ಈಜಲು ಹೋಗಿ ಕೊಚ್ಚಿಕೊಂಡು ಹೋಗಿದ್ದಾನೆ.
ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಸ್ವಪ್ನಿಲ್ ನನ್ನು ಹಿಡಿಯಲು ಆತನ ಸ್ನೇಹಿತರು ಯತ್ನಿಸಿದ್ದಾರೆಯಾದರೂ ನೀರಿನ ರಭಸ ಹೆಚ್ಚಾಗಿದ್ದರಿಂದ ಆತನನ್ನು ಹಿಡಿಯಲು ಸಾಧ್ಯವಾಗಿಲ್ಲ. ನೋಡ ನೋಡುತ್ತಲೇ ನೀರಿನಲ್ಲಿ ಕೊಚ್ಚಿಕೊಂಡು ಹೋದ ಸ್ವಪ್ನಿಲ್ ಕಣ್ಮರೆಯಾಗಿದ್ದಾನೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…