ಮುಂಬೈ, : ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ.
ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ ಅನ್ಸಾರಿ (8) ಎನ್ನಲಾಗಿದ್ದು. ಅದ್ನಾನ್ ಅನ್ಸಾರಿ (4) ಮತ್ತು ಮರಿಯಾ ಸೈಯದ್ (9) ನಾಪತ್ತೆಯಾಗಿದ್ದಾರೆ.
ಭಾನುವಾರ ಪುಣೆ ನಗರದ ಸೈಯದ್ ನಗರ ಮೂಲದ ಕುಟುಂಬವೊಂದು ರಜಾದಿನವಾಗಿದ್ದರಿಂದ ಕುಟುಂಬದ ಏಳು ಮಂದಿ ಸದಸ್ಯರು ಮುಂಬೈಯಿಂದ 80 ಕಿ.ಮೀ ದೂರದಲ್ಲಿರುವ ಭೂಶಿ ಅಣೆಕಟ್ಟಿನ ಹಿನ್ನೀ ರಿನ ಲೋನಾವಾಲಾ ಜಲಪಾತ ಬಳಿ ಬಂದಿದ್ದಾರೆ.
ಈ ವೇಳೆ ನೀರಿನ ಪ್ರಮಾಣ ಕಡಿಮೆ ಇದ್ದುದರಿಂದ ಕುಟುಂಬ ಸದಸ್ಯರು ನೀರಿನ ನಡುವೆ ಆಟವಾಡಲು ತೆರಳಿದ್ದಾರೆ. ದುರದೃಷ್ಟವಶಾತ್ ಈ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸರಿಯುತ್ತಿರುವ ಮಳೆಯಿಂದ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು ಪರಿಣಾಮ ಹಿನ್ನೀ ರಿನ ಮಟ್ಟ ಏರಿಕೆಯಾಗಿದೆ ಹಾಗಾಗಿ ಏಕಾಏಕಿ ಜಲಪಾತದ ಬಳಿ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಏಳು ಮಂದಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ .ಈ ವೇಳೆ ಇಬ್ಬರು ದಡ ಸೇರಿ ಬಚಾವಾಗಿದ್ದು ಐವರು ನಿರುಪಾಲಾಗಿದ್ದರೆ. ಇದರಲ್ಲಿ ಮೂವರ ಮೃತ ದೇಹ ಭಾನುವಾರ ಪತ್ತೆಯಾಗಿದ್ದು ಇಬ್ಬರು ನಾಪತ್ತೆಯಾಗಿದ್ದರು ಅವರ ಮೃತದೇಹ ಪತ್ತೆ ಕಾರ್ಯಾಚರಣೆ ಇಂದು ನಡೆಸುವುದಾಗಿ ರಕ್ಷಣಾ ತಂಡ ತಿಳಿಸಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…