Featured

ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಐವರು ನೀರು ಪಾಲು -vishwanews24

ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಐವರು ನೀರು ಪಾಲು ; ಮೂವರ ಮೃತದೇಹ  ಪತ್ತೆ , ಇಬ್ಬರು ನಾಪತ್ತೆ

ಮುಂಬೈ, : ಜಲಪಾತದಲ್ಲಿ ಪ್ರವಾಹಕ್ಕೆ ಸಿಲುಕಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಇಬ್ಬರು ನಾಪತ್ತೆಯಾಗಿರುವ ಘಟನೆ ಮುಂಬೈ ಸಮೀಪದ ಲೋನಾವಾಲಾ ಜಲಪಾತದಲ್ಲಿ ಭಾನುವಾರ ಸಂಭವಿಸಿದೆ.

ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ ಅನ್ಸಾರಿ (8) ಎನ್ನಲಾಗಿದ್ದು. ಅದ್ನಾನ್ ಅನ್ಸಾರಿ (4) ಮತ್ತು ಮರಿಯಾ ಸೈಯದ್ (9) ನಾಪತ್ತೆಯಾಗಿದ್ದಾರೆ.

ಭಾನುವಾರ ಪುಣೆ ನಗರದ ಸೈಯದ್ ನಗರ ಮೂಲದ ಕುಟುಂಬವೊಂದು ರಜಾದಿನವಾಗಿದ್ದರಿಂದ ಕುಟುಂಬದ ಏಳು ಮಂದಿ ಸದಸ್ಯರು ಮುಂಬೈಯಿಂದ 80 ಕಿ.ಮೀ ದೂರದಲ್ಲಿರುವ ಭೂಶಿ ಅಣೆಕಟ್ಟಿನ ಹಿನ್ನೀ ರಿನ ಲೋನಾವಾಲಾ ಜಲಪಾತ ಬಳಿ ಬಂದಿದ್ದಾರೆ.

ಈ ವೇಳೆ ನೀರಿನ ಪ್ರಮಾಣ ಕಡಿಮೆ ಇದ್ದುದರಿಂದ ಕುಟುಂಬ ಸದಸ್ಯರು ನೀರಿನ ನಡುವೆ ಆಟವಾಡಲು ತೆರಳಿದ್ದಾರೆ. ದುರದೃಷ್ಟವಶಾತ್ ಈ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಸರಿಯುತ್ತಿರುವ ಮಳೆಯಿಂದ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು ಪರಿಣಾಮ ಹಿನ್ನೀ ರಿನ ಮಟ್ಟ ಏರಿಕೆಯಾಗಿದೆ ಹಾಗಾಗಿ ಏಕಾಏಕಿ ಜಲಪಾತದ ಬಳಿ ನೀರಿನ ಮಟ್ಟ ಏರಿಕೆಯಾದ ಪರಿಣಾಮ ಏಳು ಮಂದಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ .ಈ ವೇಳೆ ಇಬ್ಬರು ದಡ ಸೇರಿ ಬಚಾವಾಗಿದ್ದು ಐವರು ನಿರುಪಾಲಾಗಿದ್ದರೆ. ಇದರಲ್ಲಿ ಮೂವರ ಮೃತ ದೇಹ ಭಾನುವಾರ ಪತ್ತೆಯಾಗಿದ್ದು ಇಬ್ಬರು ನಾಪತ್ತೆಯಾಗಿದ್ದರು ಅವರ ಮೃತದೇಹ ಪತ್ತೆ ಕಾರ್ಯಾಚರಣೆ ಇಂದು ನಡೆಸುವುದಾಗಿ ರಕ್ಷಣಾ ತಂಡ ತಿಳಿಸಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

1 hour ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

1 hour ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

1 hour ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago