ಬೆಂಗಳೂರು: ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್ನಲ್ಲಿ ನಡೆದಿದೆ.
ಸದ್ದಾಂ ಪಾಷಾ(20) ಸಾವನ್ನಪ್ಪಿದ್ದರೆ, ಉಮ್ರಾನ್ ಪಾಷಾ ಮತ್ತು ಮುಬಾರಕ್ ಪಾಷಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೆಜೆ ನಗರ ಮೂಲದ ಇವರು ಒಂದೇ ಸ್ಕೂಟರಿನಲ್ಲಿ ಸಂಚರಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಜಲ ಮಂಡಳಿಯವರು ಪೈಪ್ ಹಾಕಲು ಹಳ್ಳ ತೆಗೆದು ಬ್ಯಾರಿಕೇಡ್ ಹಾಕಿದ್ದರು. ಕೊಮ್ಮಘಟ್ಟ ಸರ್ಕಲ್ ಬಳಿ ಬರುವಾಗ ಬ್ಯಾರಿಕೇಡ್ ನಡುವಿನ ಸಣ್ಣ ಜಾಗದಲ್ಲಿ ವೇಗವಾಗಿ ದ್ವಿಚಕ್ರ ಚಲಾಯಿಸಿದ ಪರಿಣಾಮ ಸವಾರ ಸದ್ದಾಂ ಪಾಷಾ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಕೂಡಲೇ ನೆರವಿಗೆ ದಾಖಲಿಸಿದ ಸ್ಥಳೀಯರು ಗಾಯಾಳುಗಳನ್ನು ಗುಂಡಿಯಿಂದ ಮೆಲಕ್ಕೆ ಎತ್ತು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…