Featured

ಜಲೀಲ್ ಹತ್ಯೆ ಪ್ರಕರಣದ ಸೂತ್ರಧಾರಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ , ಉನ್ನತ ಮಟ್ಟದ ತನಿಖೆಗೆ ಒಪ್ಪಿಸಿ : ಎಸ್‌ಡಿಪಿಐ – Vishwanews24

ಸುರತ್ಕಲ್ ನ ಜಲೀಲ್ ಹತ್ಯೆ ಪ್ರಕರಣ : ಸಂಘಪರಿವಾರದ ಮೂವರು ಆರೋಪಿಗಳನ್ನು ಶೀಘ್ರ ಬಂಧಿಸಿದ ದ.ಕ ಪೊಲೀಸ್ ಇಲಾಖೆಯ ನಡೆ ಸ್ವಾಗತಾರ್ಹ : ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ

ಮಂಗಳೂರು: ಸುರತ್ಕಲ್ ನ ಜಲೀಲ್ ಹತ್ಯೆ ನಡೆಸಿದ ಸಂಘಪರಿವಾರ ಸಂಘಟನೆಯ ಮೂವರು ಆರೋಪಿಗಳನ್ನು ಶೀಘ್ರ ಬಂಧಿಸಿದ ದ.ಕ ಪೊಲೀಸ್ ಇಲಾಖೆಯ ನಡೆ ಸ್ವಾಗತಾರ್ಹವಾಗಿದೆ.

ಆದರೆ ಇವರು ಘಟನೆಯ ಪಾತ್ರಧಾರಿಗಳಾಗಿರುತ್ತಾರೆ,ಈ ಪ್ರಕರಣದ ಸೂತ್ರದಾರಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ ಕಠಿಣ ಕಾನೂನಿನ ಅಡಿಯಲ್ಲಿ ಕೇಸ್ ದಾಖಲಿಸಿ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಬಿಡುಗಡೆಗೊಳಿಸಿರುವ ಅವರು ಸಂಘಪರಿವಾರ ಈ ಹಿಂದಿನಿಂದಲೂ ಹತ್ಯಾ ರಾಜಕೀಯದಲ್ಲಿ ನಂಬಿಕೆ ಇರಿಸಿ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದೆ.ಈ ಬಗ್ಗೆ ಎಸ್‌ಡಿಪಿಐ ನಿಯೋಗ ಹಲವಾರು ಬಾರಿ ಜಿಲ್ಲಾಡಳಿತ, ಪೋಲಿಸ್ ಕಮಿಷನರ್ ಜಿಲ್ಲಾ ಪೊಲೀಸ್ ಅಧಿಕಾರಿಯವರನ್ನು ಭೇಟಿ ಮಾಡಿ ಮನವಿ ಮಾಡಿತ್ತು.ಆದರೆ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸದೇ ಸಂಘಪರಿವಾರ ಅನೈತಿಕ ಗೂಂಡಾಗಿರಿ ನಡೆಸಿ ಕೊಲೆಯತ್ನ ದಂತಹ ಕೃತ್ಯಗಳನ್ನು ನಡೆಸಿದಾಗಲೂ ಠಾಣೆಯಲ್ಲೇ ಜಾಮೀನು ನೀಡುವಂತಹ ಲಘು ಸೆಕ್ಷನ್ ಹಾಕಿ ಬಿಡುಗಡೆ ಗೊಳಿಸುವ ಕಾರಣದಿಂದಾಗಿ ಪ್ರೇರಣೆಗೊಂಡಿರುವ ಸಂಘಪರಿವಾರ ಇಂದು ಅಲ್ಪಸಂಖ್ಯಾತರನ್ನು ಹತ್ಯಾ ನಡೆಸುತ್ತಿದೆ.

ಹತ್ಯೆ ನಡೆಸಿದವರಿಗೆ ಗೊತ್ತು ಈ ಕೃತ್ಯದಿಂದ ನಾವು ಜೈಲಿಗೆ ಹೋಗಲಿದ್ದೇವೆ,ಶಿಕ್ಷೆ ಅನುಭವಿಸಲಿದ್ದೇವೆ ಎಂದು, ಆದರೂ ಇವರು ಈ ಕೃತ್ಯ ನಡೆಸುತ್ತಾರೆ ಎಂದಾದರೆ ಇದು ಇವರ ಏಕ ತೀರ್ಮಾನ ವಾಗಿರುವುದಿಲ್ಲ ಬದಲಿಗೆ ಇದರ ಹಿಂದೆ ಸಂಘಪರಿವಾರದ ಮುಖಂಡರ ತೀರ್ಮಾನ ಹಾಗೂ ಅದಕ್ಕೆ ಬೇಕಾಗಿ ವ್ಯವಸ್ಥೆ ಮಾಡುವ ಹಿಂದುತ್ವ ಶಕ್ತಿಗಳ ಕೈವಾಡ ಇರುತ್ತದೆ.

ಹಾಗಾಗಿ ಪೋಲಿಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದರ ಸೂತ್ರದಾರಿಗಳು ಎಷ್ಟೇ ಪ್ರಬಲರಾಗಿದ್ದರು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ರೀತಿಯಲ್ಲಿ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಫಾಝಿಲ್ ಹಂತಕರೋರ್ವನಿಗೆ ಶೀಘ್ರದಲ್ಲೇ ಜಾಮೀನು ಸಿಕ್ಕಿದ ರೀತಿಯಲ್ಲಿ ಈ ಪ್ರಕರಣದಲ್ಲಿ ಹಾಗಾಗದಂತೆ ಎಚ್ಚರಿಕೆ ವಹಿಸಿ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

21 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

21 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago