Featured

ಜಲೀಲ್ ಹತ್ಯೆ ಪ್ರಕರಣದ ಸೂತ್ರಧಾರಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ , ಉನ್ನತ ಮಟ್ಟದ ತನಿಖೆಗೆ ಒಪ್ಪಿಸಿ : ಎಸ್‌ಡಿಪಿಐ – Vishwanews24

ಸುರತ್ಕಲ್ ನ ಜಲೀಲ್ ಹತ್ಯೆ ಪ್ರಕರಣ : ಸಂಘಪರಿವಾರದ ಮೂವರು ಆರೋಪಿಗಳನ್ನು ಶೀಘ್ರ ಬಂಧಿಸಿದ ದ.ಕ ಪೊಲೀಸ್ ಇಲಾಖೆಯ ನಡೆ ಸ್ವಾಗತಾರ್ಹ : ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ

ಮಂಗಳೂರು: ಸುರತ್ಕಲ್ ನ ಜಲೀಲ್ ಹತ್ಯೆ ನಡೆಸಿದ ಸಂಘಪರಿವಾರ ಸಂಘಟನೆಯ ಮೂವರು ಆರೋಪಿಗಳನ್ನು ಶೀಘ್ರ ಬಂಧಿಸಿದ ದ.ಕ ಪೊಲೀಸ್ ಇಲಾಖೆಯ ನಡೆ ಸ್ವಾಗತಾರ್ಹವಾಗಿದೆ.

ಆದರೆ ಇವರು ಘಟನೆಯ ಪಾತ್ರಧಾರಿಗಳಾಗಿರುತ್ತಾರೆ,ಈ ಪ್ರಕರಣದ ಸೂತ್ರದಾರಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ ಕಠಿಣ ಕಾನೂನಿನ ಅಡಿಯಲ್ಲಿ ಕೇಸ್ ದಾಖಲಿಸಿ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಬಿಡುಗಡೆಗೊಳಿಸಿರುವ ಅವರು ಸಂಘಪರಿವಾರ ಈ ಹಿಂದಿನಿಂದಲೂ ಹತ್ಯಾ ರಾಜಕೀಯದಲ್ಲಿ ನಂಬಿಕೆ ಇರಿಸಿ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದೆ.ಈ ಬಗ್ಗೆ ಎಸ್‌ಡಿಪಿಐ ನಿಯೋಗ ಹಲವಾರು ಬಾರಿ ಜಿಲ್ಲಾಡಳಿತ, ಪೋಲಿಸ್ ಕಮಿಷನರ್ ಜಿಲ್ಲಾ ಪೊಲೀಸ್ ಅಧಿಕಾರಿಯವರನ್ನು ಭೇಟಿ ಮಾಡಿ ಮನವಿ ಮಾಡಿತ್ತು.ಆದರೆ ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸದೇ ಸಂಘಪರಿವಾರ ಅನೈತಿಕ ಗೂಂಡಾಗಿರಿ ನಡೆಸಿ ಕೊಲೆಯತ್ನ ದಂತಹ ಕೃತ್ಯಗಳನ್ನು ನಡೆಸಿದಾಗಲೂ ಠಾಣೆಯಲ್ಲೇ ಜಾಮೀನು ನೀಡುವಂತಹ ಲಘು ಸೆಕ್ಷನ್ ಹಾಕಿ ಬಿಡುಗಡೆ ಗೊಳಿಸುವ ಕಾರಣದಿಂದಾಗಿ ಪ್ರೇರಣೆಗೊಂಡಿರುವ ಸಂಘಪರಿವಾರ ಇಂದು ಅಲ್ಪಸಂಖ್ಯಾತರನ್ನು ಹತ್ಯಾ ನಡೆಸುತ್ತಿದೆ.

ಹತ್ಯೆ ನಡೆಸಿದವರಿಗೆ ಗೊತ್ತು ಈ ಕೃತ್ಯದಿಂದ ನಾವು ಜೈಲಿಗೆ ಹೋಗಲಿದ್ದೇವೆ,ಶಿಕ್ಷೆ ಅನುಭವಿಸಲಿದ್ದೇವೆ ಎಂದು, ಆದರೂ ಇವರು ಈ ಕೃತ್ಯ ನಡೆಸುತ್ತಾರೆ ಎಂದಾದರೆ ಇದು ಇವರ ಏಕ ತೀರ್ಮಾನ ವಾಗಿರುವುದಿಲ್ಲ ಬದಲಿಗೆ ಇದರ ಹಿಂದೆ ಸಂಘಪರಿವಾರದ ಮುಖಂಡರ ತೀರ್ಮಾನ ಹಾಗೂ ಅದಕ್ಕೆ ಬೇಕಾಗಿ ವ್ಯವಸ್ಥೆ ಮಾಡುವ ಹಿಂದುತ್ವ ಶಕ್ತಿಗಳ ಕೈವಾಡ ಇರುತ್ತದೆ.

ಹಾಗಾಗಿ ಪೋಲಿಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದರ ಸೂತ್ರದಾರಿಗಳು ಎಷ್ಟೇ ಪ್ರಬಲರಾಗಿದ್ದರು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ರೀತಿಯಲ್ಲಿ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಫಾಝಿಲ್ ಹಂತಕರೋರ್ವನಿಗೆ ಶೀಘ್ರದಲ್ಲೇ ಜಾಮೀನು ಸಿಕ್ಕಿದ ರೀತಿಯಲ್ಲಿ ಈ ಪ್ರಕರಣದಲ್ಲಿ ಹಾಗಾಗದಂತೆ ಎಚ್ಚರಿಕೆ ವಹಿಸಿ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

7 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

7 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

7 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

8 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

8 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

8 hours ago