Featured

ಜಲ ಸಂರಕ್ಷಣೆಗಾಗಿ ಜಲಶಕ್ತಿ ಅಭಿಯಾನ -Vishwanews24

ಜಲ ಸಂರಕ್ಷಣೆಗಾಗಿ ಜಲಶಕ್ತಿ ಅಭಿಯಾನ -Vishwanews24

ದೇಶದ ಗ್ರಾಮೀಣ ಪ್ರದೇಶಗಳು ಎದುರಿಸುತ್ತಿರುವ ಜಲಮೂಲಗಳ ಕೊರತೆ , ಅಂರ್ತಜಲ ಸಮಸ್ಯೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರು ಹಾಗೂ ಕುಡಿಯುವ ನೀರಿನ ಕೊರೆತೆಯನ್ನು ನಿವಾರಿಸಿ , ಈ ಮೂಲಕ ಕೃಷಿ ಚಟುವಟಿಕೆಗಳನ್ನು ಅಭಿವೃಧ್ದಿಗೊಳಿಸಿ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರವು ಜಲಶಕ್ತಿ ಅಭಿಯಾನ ಎಂಬ ಬಹುದೊಡ್ಡ ಯೋಜನೆಯನ್ನು ರಾಷ್ಟಾçದ್ಯಂತ ಅನುಷ್ಠಾನಗೊಳಿಸಿದೆ.
ಕೇಂದ್ರ ಸರ್ಕಾರವು ಮಾರ್ಚ್ ೨೨, ೨೦೨೧ ರಿಂದ ನವೆಂಬರ್ ೩೦, ೨೦೨೧ ರ ವರೆಗೆ ಜಲಶಕ್ತಿ ಅಭಿಯಾನ-Catch the Rain ಅಭಿಯಾನವನ್ನು ಹಮ್ಮಿಕೊಳ್ಳಲು ನಿರ್ದೇಶನ ನೀಡಿದ್ದು, ಪ್ರಧಾನ ಮಂತ್ರಿಗಳು ಈ ಅಭಿಯಾನಕ್ಕೆ ಈಗಾಗಲೇ ಚಾಲನೆಯನ್ನು ನೀಡಿ, ಮುಂಗಾರು ಪೂರ್ವದ ೧೦೦ ದಿನ ಅವಧಿಯಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಮಳೆ ನೀರು ಸಂರಕ್ಷಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕರೆ ನೀಡಿದ್ದಾರೆ.

ಮಳೆ ನೀರು ಸಂರಕ್ಷಣೆಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಾಕಷ್ಟು ಅವಕಾಶಗಳಿದ್ದು, ಅದನ್ನು ಬಳಸಿಕೊಂಡು ಅಂತರ್ಜಲ ಸಂರಕ್ಷಣೆಗೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಗೊಳಿಸಬಹುದಾಗಿದೆ. ಗ್ರಾಮದ ವ್ಯಾಪ್ತಿಯಲ್ಲಿರುವ ಕೆರೆ, ಕಲ್ಯಾಣಿಗಳ ಸಮಗ್ರ ಅಭಿವೃದ್ಧಿ, ನೀರು ಹರಿದು ಹೋಗುವ ನಾಲಾ/ ಕಾಲುವೆಗಳ ಪುನಶ್ಚೇತನ, ಹೊಸಕೆರೆ, ಗೋಕಟ್ಟೆಗಳ ನಿರ್ಮಾಣ, ಕಿಂಡಿಆಣೆಕಟ್ಟು, ಬೋರ್‌ವೆಲ್‌ರಿಚಾರ್ಜ್, ಕಟ್ಟಡಗಳಿಗೆ ಮಳೆ ನೀರುಕೊಯ್ಲು, ಅರಣ್ಯೀಕರಣಕಾಮಗಾರಿಇತ್ಯಾದಿ ಸಮುದಾಯ ಕಾರ್ಯಕ್ರಮಗಳನ್ನು ನೀರಾವರಿ ಬಾವಿ ನಿರ್ಮಾಣ, ಸೋಕ್ ಪಿಟ್‌ಗಳ ನಿರ್ಮಾಣ, ಬದುಗಳ ನಿರ್ಮಾಣ, ಕೃಷಿಹೊಂಡ ಮೊದಲಾದ ವೈಯಕ್ತಿಕ ಕಾರ್ಯಕ್ರಮಗಳನ್ನು MGNREGA ಯಡಿ ಕೈಗೆತ್ತಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವೇತನವನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ : ಸಿಎಂ ಖಡಕ್ ಎಚ್ಚರಿಕೆ -Vishwanews24

MGNREGA ಕಾರ್ಯಕ್ರಮದಡಿ ಕೂಲಿದರ ವನ್ನುರೂ.೨೭೫ ರಿಂದರೂ.೨೮೯ ಕ್ಕೆ ಹೆಚ್ಚಿಸಲಾಗಿದ್ದು, ವರ್ಷಕ್ಕೆ ಪ್ರತೀಕುಟುಂಬಕ್ಕೆ ೧೦೦ ದಿನಗಳು ಉದ್ಯೋಗಅಭಿಯಾನಜಾರಿಯಲ್ಲಿದ್ದು, ಉದ್ಯೋಗಚೀಟಿ ಹೊಂದದ ಕುಟುಂಬಗಳು ಗ್ರಾಮ ಪಂಚಾಯತ್ ಸಂಪರ್ಕಿಸಿ ಉದ್ಯೋ ಗಚೀಟಿ ಪಡೆದುಗ್ರಾಮ ಪಂಚಾಯತ್‌ನಿ0ದ ಕೂಲಿ ಉದ್ಯೋಗ ಪಡೆಯಬಹುದಾಗಿದೆ.

ಉಡುಪಿ ಜಿಲ್ಲೆಯಲ್ಲಿMGNREGA ಕಾರ್ಯಕ್ರಮಕ್ಕೆ ಸಂಬ0ಧಿಸಿದ0ತೆ ಉತ್ತಮ ಸ್ಪಂದನೆದೊರೆತಿದ್ದು, ೨೦೨೦-೨೧ ನೇ ಸಾಲಿನಲ್ಲಿರೂ.೬.೬೮ ಲಕ್ಷ ಮಾನವದಿನಗಳ ಸೃಜನೆ ಮಾಡಲಾಗಿದೆ.ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳನ್ನು ಕೈಗೆತ್ತಿಕೊಂಡುಒಟ್ಟು ೭,೬೮೭ ಕಾಮಗಾರಿಗಳನ್ನು ಅನುಷ್ಠಾನ ಮಾಡಲಾಗಿದೆ.

ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನದ ಅಂಗವಾಗಿ ಪ್ರತೀಗ್ರಾಮಕ್ಕೆ ಕನಿಷ್ಟ ೧ ಕೆರೆಯನ್ನು ಗುರುತಿಸಿ ಅದರ ಸಮಗ್ರಅಭಿವೃದ್ಧಿ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಒಟ್ಟು ೧೪೧ ಕೆರೆ, ೧೬೦ ಕಾಲುವೆ/ ತೋಡು ಹೂಳೆತ್ತುವುದು, ೨೦ ಕಿಂಡಿಆಣೆಕಟ್ಟು ನಿರ್ಮಾಣ, ೫೦ ಬೋರ್‌ವೆಲ್‌ರಿಚಾರ್ಜ್, ೧೪೫೫ ನೀರಾವರಿ ಬಾವಿ ನಿರ್ಮಾಣದ ಗುರಿ ಹೊಂದಲಾಗಿದೆ.ಪ್ರತೀ ಗ್ರಾಮ ಪಂಚಾಯತ್‌ನಲ್ಲಿ ಕನಿಷ್ಟ ಒಂದುಕಟ್ಟಡಕ್ಕೆ ಮಳೆನೀರು ಕೊಯ್ಲು ಕಾಮಗಾರಿ ನಿರ್ವಹಿಸುವಂತೆ, ಪ್ರತೀ ಗ್ರಾಮ ಪಂಚಾಯತ್‌ಗೆ ಕನಿಷ್ಟ ೫೦ ಸೋಕ್ ಪಿಟ್ ನಿರ್ಮಾಣದ ಸೂಚನೆ ನೀಡಲಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆನ್ ಲೈನ್ ತರಗತಿಗಳು ಇರುತ್ತವೆ, ಆನ್ ಲೈನ್ ಪರೀಕ್ಷೆ ಸಾಧ್ಯವಿಲ್ಲ : ಡಿಸಿಎಂ -Vishwanews24

ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿಜಲಶಕ್ತಿಅಭಿಯಾನದಲ್ಲಿಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆ ಕಾರ್ಯಕ್ರಮ ಹೊರತುಪಡಿಸಿ ಸಹ ಅಂತರ್ಜಲ ಮರುಪೂರಣಗೊಳಿಸುವ ಮೇಲಿನ ಕಾರ್ಯಕ್ರಮದಲ್ಲಿ ಸ್ವ-ಇಚ್ಛೆಯಿಂದ ಭಾಗವಹಿಸಬಹುದಾಗಿದ್ದು, ಕೆರೆ ಅಭಿವೃದ್ಧಿ, ಅರಣ್ಯೀಕರಣ ಮೊದಲಾದ ಸಮುದಾಯ ಕಾರ್ಯಕ್ರಮ, ಸ್ವಂತ ಮನೆಗಳಲ್ಲಿ ಮಳೆ ನೀರುಕೊಯ್ಲು, ನೀರು ಇಂಗಿಸುವಿಕೆ, ಸೋಕ್ ಪಿಟ್ ನಿರ್ಮಾಣ ಇತ್ಯಾದಿಗಳನ್ನು ಸ್ವಂತವಾಗಿ ಸಹ ಮಾಡಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಕಾರ್ಮಿಕ ಬಲದ ಲಭ್ಯತೆಯಿಂದಾಗಿ , ಜಲಶಕ್ತಿ ಅಭಿಯಾನ ಯೋಜನೆಯು ಮುಂಬರುವ ಮುಂಗಾರು ಮಳೆ ನೀರಿನ ಸಂರಕ್ಷಣೆ ಹಾಗೂ ಅಂತರ್ಜಲ ವೃಧ್ದಿಗಾಗಿ ಮಾಡಬೇಕಾದ ಸಿದ್ಧತೆಗಳ ಹಿನ್ನೆಲೆಯಲ್ಲಿ ಇಡೀ ದೇಶಕ್ಕೆ ಈ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ.
ಉಡುಪಿ ಜಿಲ್ಲೆಯಲ್ಲಿ ಜಲಶಕ್ತಿ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: ಉಡುಪಿ ಜಿಲ್ಲಾ ಪಂಚಾಯತ್ ನ ದೂ. ಸಂಖ್ಯೆ ೦೮೨೦-೨೫೭೪೯೪೫ ಅಥವಾ ತಮ್ಮ ಸಮೀಪದ ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಕೊರೊನಾಗೆ ಮೂರನೇ ಲಸಿಕೆ ; ರಷ್ಯಾದ ಸ್ಪುಟ್ನಿಕ್ -V ತುರ್ತು ಬಳಕೆಗೆ ಕೇಂದ್ರ ಅನುಮತಿ -Vishwanews24

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

8 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

8 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

8 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

9 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

9 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

11 hours ago